Advertisement
Categories: Uncategorized

ಬೆಳ್ಳಾರೆ ಮಸೀದಿ ವಿವಾದ: ಜಮಾಅತ್ ಅಧ್ಯಕ್ಷರಿಂದ ಸ್ಪಷ್ಟನೆ

Share

ಬೆಳ್ಳಾರೆ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಾಫಿ ಬೆಳ್ಳಾರೆಯವರ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳು ಬೇಕಾಗಿಲ್ಲ. ಎಲ್ಲಾ ವರ್ಷದಂತೆ ಈ ವರ್ಷವೂ ಭಾಷಣಕ್ಕೆ ಅನುಮತಿ ಕೋರಿ ನನಗೆ ಲಿಖಿತವಾಗಿ ಅರ್ಜಿ ಸಲ್ಲಿಸಿದ್ದರು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್ ಅಧ್ಯಕ್ಷ  ಕೆ. ಎಮ್. ಮಹಮ್ಮದ್ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಭಾಷಣಕ್ಕೆ 17 ಮಂದಿ ಜಮಾಅತ್ ಸದಸ್ಯರಲ್ಲಿ 6 ಮಂದಿಗೆ  ಮಾತ್ರವೇ ಆಕ್ಷೇಪವಿದ್ದು ಇತರರ ಬಹುಮತದ ಅಭಿಪ್ರಾಯವನ್ನು ಪರಿಗಣಿಸಿ ಭಾಷಣಕ್ಕೆ ನಾನು ಲಿಖಿತವಾಗಿ ಅನುಮತಿ ನೀಡಿರುತ್ತೇನೆ. ಶಾಫಿ ಬೆಳ್ಳಾರೆಯವರು ನಮ್ಮ ಜಮಾಅತಿನ ಆಡಳಿತ ಮಂಡಳಿ ಸದಸ್ಯರಾಗಿರುತ್ತಾರೆ. ಆದರೆ ಕೆಲವರು
ರಾಜಕೀಯ ಉದ್ದೇಶಕ್ಕಾಗಿ ಅವರು ಪ್ರತಿನಿಧಿಸುವ ಸಂಘಟನೆ ಮತ್ತು ಪಾರ್ಟಿಯನ್ನು ಎಳೆದು ತಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಜಮಾಅತಿನಲ್ಲಿ ವಿವಿಧ ಪಾರ್ಟಿ ಮತ್ತು ಸಂಘಟನೆಗೆ ಸೇರಿದವರಿದ್ದು ಅವರೆಲ್ಲರೂ ನಮ್ಮ ಜಮಾಅತಿಗರೇ ಹೊರತು ಅವರು ಪ್ರತಿನಿಧಿಸುವ ಪಾರ್ಟಿ ಹೆಸರಿನಲ್ಲಿ ಗುರುತಿಸಿಕೊಂಡಿರುವುದಲ್ಲ. ಭಾಷಣಕ್ಕೆ ಅನುಮತಿ ನೀಡಿರುವಾಗ ಅದನ್ನು ತಡೆಯಲು ಕೆಲವರು ಯತ್ನಿಸಿದಾಗ ಅಲ್ಲಿ ಸೇರಿದ ಜಮಾಅತಿಗರಾದ
ಎಲ್ಲರೂ (ವಿವಿಧ ಪಾರ್ಟಿ& ಸಂಘಟನೆಗೆ ಸೇರಿದವರಾದ) ಅವರನ್ನು ಮಸೀದಿಯಿಂದ ಹೊರ ಹೋಗುವಂತೆ ಮನವಿ ಮಾಡಿ ಹೊರಕಳುಹಿಸಿ ಶಾಫಿ ಬೆಳ್ಳಾರೆಯವರ ಭಾಷಣ ನಡೆದಿರುತ್ತದೆ. ಹೀಗಾಗಿ ಯಾವುದೇ ಗೊಂದಲಗಳು ಬೇಡ ಎಂದು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago