Advertisement
Categories: Uncategorized

ಬೆಳ್ಳಾರೆ ಮಸೀದಿ ವಿವಾದ: ಜಮಾಅತ್ ಅಧ್ಯಕ್ಷರಿಂದ ಸ್ಪಷ್ಟನೆ

Share

ಬೆಳ್ಳಾರೆ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಾಫಿ ಬೆಳ್ಳಾರೆಯವರ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳು ಬೇಕಾಗಿಲ್ಲ. ಎಲ್ಲಾ ವರ್ಷದಂತೆ ಈ ವರ್ಷವೂ ಭಾಷಣಕ್ಕೆ ಅನುಮತಿ ಕೋರಿ ನನಗೆ ಲಿಖಿತವಾಗಿ ಅರ್ಜಿ ಸಲ್ಲಿಸಿದ್ದರು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್ ಅಧ್ಯಕ್ಷ  ಕೆ. ಎಮ್. ಮಹಮ್ಮದ್ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಭಾಷಣಕ್ಕೆ 17 ಮಂದಿ ಜಮಾಅತ್ ಸದಸ್ಯರಲ್ಲಿ 6 ಮಂದಿಗೆ  ಮಾತ್ರವೇ ಆಕ್ಷೇಪವಿದ್ದು ಇತರರ ಬಹುಮತದ ಅಭಿಪ್ರಾಯವನ್ನು ಪರಿಗಣಿಸಿ ಭಾಷಣಕ್ಕೆ ನಾನು ಲಿಖಿತವಾಗಿ ಅನುಮತಿ ನೀಡಿರುತ್ತೇನೆ. ಶಾಫಿ ಬೆಳ್ಳಾರೆಯವರು ನಮ್ಮ ಜಮಾಅತಿನ ಆಡಳಿತ ಮಂಡಳಿ ಸದಸ್ಯರಾಗಿರುತ್ತಾರೆ. ಆದರೆ ಕೆಲವರು
ರಾಜಕೀಯ ಉದ್ದೇಶಕ್ಕಾಗಿ ಅವರು ಪ್ರತಿನಿಧಿಸುವ ಸಂಘಟನೆ ಮತ್ತು ಪಾರ್ಟಿಯನ್ನು ಎಳೆದು ತಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಜಮಾಅತಿನಲ್ಲಿ ವಿವಿಧ ಪಾರ್ಟಿ ಮತ್ತು ಸಂಘಟನೆಗೆ ಸೇರಿದವರಿದ್ದು ಅವರೆಲ್ಲರೂ ನಮ್ಮ ಜಮಾಅತಿಗರೇ ಹೊರತು ಅವರು ಪ್ರತಿನಿಧಿಸುವ ಪಾರ್ಟಿ ಹೆಸರಿನಲ್ಲಿ ಗುರುತಿಸಿಕೊಂಡಿರುವುದಲ್ಲ. ಭಾಷಣಕ್ಕೆ ಅನುಮತಿ ನೀಡಿರುವಾಗ ಅದನ್ನು ತಡೆಯಲು ಕೆಲವರು ಯತ್ನಿಸಿದಾಗ ಅಲ್ಲಿ ಸೇರಿದ ಜಮಾಅತಿಗರಾದ
ಎಲ್ಲರೂ (ವಿವಿಧ ಪಾರ್ಟಿ& ಸಂಘಟನೆಗೆ ಸೇರಿದವರಾದ) ಅವರನ್ನು ಮಸೀದಿಯಿಂದ ಹೊರ ಹೋಗುವಂತೆ ಮನವಿ ಮಾಡಿ ಹೊರಕಳುಹಿಸಿ ಶಾಫಿ ಬೆಳ್ಳಾರೆಯವರ ಭಾಷಣ ನಡೆದಿರುತ್ತದೆ. ಹೀಗಾಗಿ ಯಾವುದೇ ಗೊಂದಲಗಳು ಬೇಡ ಎಂದು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

4 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

5 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

5 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

5 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

5 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

5 hours ago