Advertisement
Categories: Uncategorized

ಬೆಳ್ಳಾರೆ ಮಸೀದಿ ವಿವಾದ: ಜಮಾಅತ್ ಅಧ್ಯಕ್ಷರಿಂದ ಸ್ಪಷ್ಟನೆ

Share

ಬೆಳ್ಳಾರೆ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಾಫಿ ಬೆಳ್ಳಾರೆಯವರ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳು ಬೇಕಾಗಿಲ್ಲ. ಎಲ್ಲಾ ವರ್ಷದಂತೆ ಈ ವರ್ಷವೂ ಭಾಷಣಕ್ಕೆ ಅನುಮತಿ ಕೋರಿ ನನಗೆ ಲಿಖಿತವಾಗಿ ಅರ್ಜಿ ಸಲ್ಲಿಸಿದ್ದರು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್ ಅಧ್ಯಕ್ಷ  ಕೆ. ಎಮ್. ಮಹಮ್ಮದ್ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಭಾಷಣಕ್ಕೆ 17 ಮಂದಿ ಜಮಾಅತ್ ಸದಸ್ಯರಲ್ಲಿ 6 ಮಂದಿಗೆ  ಮಾತ್ರವೇ ಆಕ್ಷೇಪವಿದ್ದು ಇತರರ ಬಹುಮತದ ಅಭಿಪ್ರಾಯವನ್ನು ಪರಿಗಣಿಸಿ ಭಾಷಣಕ್ಕೆ ನಾನು ಲಿಖಿತವಾಗಿ ಅನುಮತಿ ನೀಡಿರುತ್ತೇನೆ. ಶಾಫಿ ಬೆಳ್ಳಾರೆಯವರು ನಮ್ಮ ಜಮಾಅತಿನ ಆಡಳಿತ ಮಂಡಳಿ ಸದಸ್ಯರಾಗಿರುತ್ತಾರೆ. ಆದರೆ ಕೆಲವರು
ರಾಜಕೀಯ ಉದ್ದೇಶಕ್ಕಾಗಿ ಅವರು ಪ್ರತಿನಿಧಿಸುವ ಸಂಘಟನೆ ಮತ್ತು ಪಾರ್ಟಿಯನ್ನು ಎಳೆದು ತಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಜಮಾಅತಿನಲ್ಲಿ ವಿವಿಧ ಪಾರ್ಟಿ ಮತ್ತು ಸಂಘಟನೆಗೆ ಸೇರಿದವರಿದ್ದು ಅವರೆಲ್ಲರೂ ನಮ್ಮ ಜಮಾಅತಿಗರೇ ಹೊರತು ಅವರು ಪ್ರತಿನಿಧಿಸುವ ಪಾರ್ಟಿ ಹೆಸರಿನಲ್ಲಿ ಗುರುತಿಸಿಕೊಂಡಿರುವುದಲ್ಲ. ಭಾಷಣಕ್ಕೆ ಅನುಮತಿ ನೀಡಿರುವಾಗ ಅದನ್ನು ತಡೆಯಲು ಕೆಲವರು ಯತ್ನಿಸಿದಾಗ ಅಲ್ಲಿ ಸೇರಿದ ಜಮಾಅತಿಗರಾದ
ಎಲ್ಲರೂ (ವಿವಿಧ ಪಾರ್ಟಿ& ಸಂಘಟನೆಗೆ ಸೇರಿದವರಾದ) ಅವರನ್ನು ಮಸೀದಿಯಿಂದ ಹೊರ ಹೋಗುವಂತೆ ಮನವಿ ಮಾಡಿ ಹೊರಕಳುಹಿಸಿ ಶಾಫಿ ಬೆಳ್ಳಾರೆಯವರ ಭಾಷಣ ನಡೆದಿರುತ್ತದೆ. ಹೀಗಾಗಿ ಯಾವುದೇ ಗೊಂದಲಗಳು ಬೇಡ ಎಂದು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

4 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

4 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

4 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

11 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

12 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

12 hours ago