Advertisement
ಸುದ್ದಿಗಳು

ಬೆಳ್ಳಾರೆ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ

Share

ಬೆಳ್ಳಾರೆ: ಹಾಲಿ ಆರೋಗ್ಯ ಸಚಿವ ಶ್ರೀರಾಮುಲು ಕಳೆದ ಬಿಜೆಪಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿಯೇ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಅನುಷ್ಠಾನಗೊಂಡಿತ್ತು. ಆದರೆ ಇಂದಿಗೂ ಅದು ಜಾರಿಗೊಂಡಿಲ್ಲ. ಶುಕ್ರವಾರ ಸನ್ಮಾನ ಸ್ವೀಕರಿಸಲು ಹುಟ್ಟೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್‍ಗೆ ಬೆಳ್ಳಾರೆ ಮುಖಂಡರಿಂದ ಅನುಷ್ಠಾನಗೊಳಿಸಲು ಮತ್ತೊಮ್ಮೆ ಮನವಿಯನ್ನು ನೀಡಲಾಯಿತು.

ಬೆಳ್ಳಾರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಗಂಗಾಧರ್ ರೈ ಪುಡ್ಕಜೆ, ಜಿಲ್ಲಾ ಪಂಚಾಯತ್ ಸದಸ್ಯ ಎಸ್‍ಎನ್ ಮನ್ಮಥ, ಬೆಳ್ಳಾರೆ ವರ್ತಕರ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು, ನೆಟ್ಟಾರು ಹಾಲು ಉತ್ಪಾಕರ ಸಂಘದ ಅಧ್ಯಕ್ಷ ವೈಪಳ ರಾಮಣ್ಣ ರೈ, ಮುಕ್ಕೂರು ಹಾಲು ಉತ್ಪಾಕರ ಸಂಘದ ಅಧ್ಯಕ್ಷ ದಯಾಕರ ಆಳ್ವ, ಬಿಜೆಪಿ ಮುಖಂಡ ಪ್ರೇಮಚಂದ್ರ ಬೆಳ್ಳಾರೆ, ಶಕ್ತಿ ಕೇಂದ್ರ ಅಧ್ಯಕ್ಷ ಶ್ರೀನಾಥ್ ಬಾಳಿಲ, ಬಿಜೆಪಿ ಯುವ ಮೋರ್ಚ ತಾಲೂಕು ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮಹಿಳಾ ಮೋರ್ಚೆ ಸದಸ್ಯೆ ಗೀತಾ ಪ್ರೇಮ್, ದ.ಕ ಜಿಲ್ಲಾ ಜೇನು ವ್ಯವಸಾಯ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ದೇವರಕಾನ, ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಕೂರೋಡಿ, ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಪನ್ನೆಗುತ್ತು, ಬಿಜೆಪಿ ಮುಖಂಡರಾದ ಪ್ರೀತಮ್ ರೈ ಬೆಳ್ಳಾರೆ, ಸಾಯಿ ಗಿರಿಧರ್ ರೈ ಪನ್ನೆ, ಮಡ್ತಿಲ ಶೇಖರ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾದ ಯತೀಶ್ ನಾಗಮಜಲು, ಸಂತೋಷ್ ಕೊಡಿಯಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago