ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…
ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit) ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…
ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…
ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…
ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.