ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…