ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…