ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…