ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…