ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…