ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.
ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.
ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…