ಬೆಳ್ಳಾರೆ : ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಆಶ್ರಯದಲ್ಲಿ ಶಿಶುಮಂದಿರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.
ಸಭಾಧ್ಯಕ್ಷತೆ ವಹಿಸಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪರಿಸರ ಜಾಗೃತಿ ಹಾಗೂ ಜಲ ಮರುಪೂರಣ ಸೇರದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಶಿಶುಮಂದಿರದ ಆವರಣದಲ್ಲಿ ಸಾಗುವಾನಿ, ಹಲಸು, ಮಾವಿನ ಗಿಡಗಳನ್ನು ನೆಡಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ನ ಅಧ್ಯಕ್ಷ ರೊ| ಬಿ. ನರಸಿಂಹ ಜೋಶಿ, ಶಮಿತಾ ಪಿ. ರೈ ಪನ್ನೆ, ಜಗನ್ನಾಥ ರೈ ತಂಬಿನಮಕ್ಕಿ, ರಾಮಚಂದ್ರ ಭಟ್ ಕೊಳಂಬಳ, ಸಂಜೀವ ಕಲಾೈ, ವಾಸುದೇವ ಆಚಾರ್ಯ ಕೊಡಿಯಾಲ, ರಮೇಶ್, ಮಾತೃಮಂಡಳಿಯ ಸದಸ್ಯೆಯರು ಹಾಗೂ ಪೋಷಕ ವರ್ಗ ಉಪಸ್ಥಿತರಿದ್ದರು.
ಶಿಶುಮಂದಿರ ಸಂಚಾಲಕರಾದ ಪಿ. ಮಹಾಲಿಂಗ ಭಟ್ ಸ್ವಾಗತಿಸಿ, ಮಾತಾಜಿ ತೇಜೇಶ್ವರಿ ವಂದಿಸಿದರು.
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…