Advertisement
Categories: Uncategorized

ಬೆಳ್ಳಾರೆ ಸದಾಶಿವ ಶಿಶುಮಂದಿರದ ದಶಮಾನೋತ್ಸವ

Share

ಬೆಳ್ಳಾರೆ: ಜೀವನದಲ್ಲಿ ಬರುವ ಎಲ್ಲಾ ವಿಧದ ಸವಾಲುಗಳನ್ನು ಎದುರಿಸಲು ಸಿದ್ಧನಿರುವವನು ಜಗತ್ತಿನೆಲ್ಲೆಡೆ  ಬದುಕುವ ಸಾಮರ್ಥ್ಯ  ಹೊಂದುವನು ಎಂದು ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಡಾ| ಎಚ್.ಮಾಧವ ಭಟ್ ಹೇಳಿದರು.

Advertisement
Advertisement
Advertisement
Advertisement
Advertisement

ಅವರು ಬೆಳ್ಳಾರೆ ಶ್ರೀ ಸದಾಶಿವ ಶಿಶುಮಂದಿರದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಂಗಳೂರು ವಿಭಾಗದ ಗೋ ಸೇವಾ ಪ್ರಮುಖ್ ಪುಂಡರೀಕಾಕ್ಷ ಮಾತನಾಡಿ, ಸಮಾಜದೊಂದಿಗೆ ಇರಬೇಕಾದ ಶೈಲಿಯನ್ನು ಕಲಿತೊಕೊಳ್ಳಬೇಕು. ಹಿಂದು ಧರ್ಮದ ಸಂಸ್ಕೃತಿಯನ್ನು ಮಕ್ಕಳಿಗೆ ಪ್ರಥಮವಾಗಿ ಹೇಳಿಕೊಡಲೇಬೇಕು. ಅಂತಹ ಕೆಲಸಗಳನ್ನು ಶಿಶುಮಂದಿರಗಳು ಮಾಡುತ್ತಿರುವು ಶ್ಲಾಘನೀಯ ಎಂದರು.

Advertisement

ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಿ.ಎಸ್ ಚಿದಾನಂದ ರಾವ್ ಪುಸ್ತಕಗಳು ಮನುಷ್ಯನ ನಿಜವಾದ ಮಿತ್ರ. ವಿಷಯಗಳು ಪುಸ್ತಕದ ಮೂಲದಲ್ಲಿದ್ದರೆ ಜನರ ಮನಸ್ಸಿನಲ್ಲಿ ದೀರ್ಘ ಸಮಯ ಉಳಿದಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವೈದಿಕ ಕ್ಷೇತ್ರದಲ್ಲಿ ಸಾಧನೆಗೈದಿರುವ ಚೂಂತಾರು ವೇ|ಮೂ ಶಿವಪ್ರಸಾದ್ ಭಟ್ ಹಾಗೂ ಜಿಲ್ಲಾ ಕೃಷಿ ಪಂಡಿತ ಪುರಸ್ಕೃತ ವಿವೇಕ್ ಆಳ್ವ ಅವರನ್ನು ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾದ ಶಶಿಕಿರಣ್ ಎಂಬವರಿಗೆ ಟ್ರಸ್ಟ್ ವತಿಯಿಂದ ಹನ್ನೊಂದು ಸಾವಿರ ರೂಪಾಯಿಗಳ ಸಹಾಯ ಧನ ವಿತರಿಸಲಾಯಿತು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ದಶಮಾನೋತ್ಸವ ಸಮಿತಿಯ ಅಧ್ಯಕ್ಷ  ಬಿ.ಸುಬ್ರಹ್ಮಣ್ಯ ಜೋಶಿ ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್‍ಕುಮಾರ್ ರೈ ಪುಡ್ಕಜೆ, ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಉಪಸ್ಥಿತರಿದ್ದರು. ಕೇಶವಮೂರ್ತಿ ಕಾವಿನಮೂಲೆ ವಂದಿಸಿದರು.  ತೇಜೇಶ್ವರಿ ವಾರ್ಷಿಕ ವರದಿ ವಾಚಿಸಿದರು. ಪ್ರದೀಪ್‍ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

7 mins ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

33 mins ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

47 mins ago

ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…

50 mins ago

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

10 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

11 hours ago