ಬೆಳ್ಳಾರೆ: ಜೀವನದಲ್ಲಿ ಬರುವ ಎಲ್ಲಾ ವಿಧದ ಸವಾಲುಗಳನ್ನು ಎದುರಿಸಲು ಸಿದ್ಧನಿರುವವನು ಜಗತ್ತಿನೆಲ್ಲೆಡೆ ಬದುಕುವ ಸಾಮರ್ಥ್ಯ ಹೊಂದುವನು ಎಂದು ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಡಾ| ಎಚ್.ಮಾಧವ ಭಟ್ ಹೇಳಿದರು.
ಅವರು ಬೆಳ್ಳಾರೆ ಶ್ರೀ ಸದಾಶಿವ ಶಿಶುಮಂದಿರದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಂಗಳೂರು ವಿಭಾಗದ ಗೋ ಸೇವಾ ಪ್ರಮುಖ್ ಪುಂಡರೀಕಾಕ್ಷ ಮಾತನಾಡಿ, ಸಮಾಜದೊಂದಿಗೆ ಇರಬೇಕಾದ ಶೈಲಿಯನ್ನು ಕಲಿತೊಕೊಳ್ಳಬೇಕು. ಹಿಂದು ಧರ್ಮದ ಸಂಸ್ಕೃತಿಯನ್ನು ಮಕ್ಕಳಿಗೆ ಪ್ರಥಮವಾಗಿ ಹೇಳಿಕೊಡಲೇಬೇಕು. ಅಂತಹ ಕೆಲಸಗಳನ್ನು ಶಿಶುಮಂದಿರಗಳು ಮಾಡುತ್ತಿರುವು ಶ್ಲಾಘನೀಯ ಎಂದರು.
ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಿ.ಎಸ್ ಚಿದಾನಂದ ರಾವ್ ಪುಸ್ತಕಗಳು ಮನುಷ್ಯನ ನಿಜವಾದ ಮಿತ್ರ. ವಿಷಯಗಳು ಪುಸ್ತಕದ ಮೂಲದಲ್ಲಿದ್ದರೆ ಜನರ ಮನಸ್ಸಿನಲ್ಲಿ ದೀರ್ಘ ಸಮಯ ಉಳಿದಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೈದಿಕ ಕ್ಷೇತ್ರದಲ್ಲಿ ಸಾಧನೆಗೈದಿರುವ ಚೂಂತಾರು ವೇ|ಮೂ ಶಿವಪ್ರಸಾದ್ ಭಟ್ ಹಾಗೂ ಜಿಲ್ಲಾ ಕೃಷಿ ಪಂಡಿತ ಪುರಸ್ಕೃತ ವಿವೇಕ್ ಆಳ್ವ ಅವರನ್ನು ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾದ ಶಶಿಕಿರಣ್ ಎಂಬವರಿಗೆ ಟ್ರಸ್ಟ್ ವತಿಯಿಂದ ಹನ್ನೊಂದು ಸಾವಿರ ರೂಪಾಯಿಗಳ ಸಹಾಯ ಧನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ಕುಮಾರ್ ರೈ ಪುಡ್ಕಜೆ, ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಉಪಸ್ಥಿತರಿದ್ದರು. ಕೇಶವಮೂರ್ತಿ ಕಾವಿನಮೂಲೆ ವಂದಿಸಿದರು. ತೇಜೇಶ್ವರಿ ವಾರ್ಷಿಕ ವರದಿ ವಾಚಿಸಿದರು. ಪ್ರದೀಪ್ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…