Advertisement
Categories: Uncategorized

ಬೆಳ್ಳಾರೆ ಸದಾಶಿವ ಶಿಶುಮಂದಿರದ ದಶಮಾನೋತ್ಸವ

Share

ಬೆಳ್ಳಾರೆ: ಜೀವನದಲ್ಲಿ ಬರುವ ಎಲ್ಲಾ ವಿಧದ ಸವಾಲುಗಳನ್ನು ಎದುರಿಸಲು ಸಿದ್ಧನಿರುವವನು ಜಗತ್ತಿನೆಲ್ಲೆಡೆ  ಬದುಕುವ ಸಾಮರ್ಥ್ಯ  ಹೊಂದುವನು ಎಂದು ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಡಾ| ಎಚ್.ಮಾಧವ ಭಟ್ ಹೇಳಿದರು.

Advertisement
Advertisement

ಅವರು ಬೆಳ್ಳಾರೆ ಶ್ರೀ ಸದಾಶಿವ ಶಿಶುಮಂದಿರದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಂಗಳೂರು ವಿಭಾಗದ ಗೋ ಸೇವಾ ಪ್ರಮುಖ್ ಪುಂಡರೀಕಾಕ್ಷ ಮಾತನಾಡಿ, ಸಮಾಜದೊಂದಿಗೆ ಇರಬೇಕಾದ ಶೈಲಿಯನ್ನು ಕಲಿತೊಕೊಳ್ಳಬೇಕು. ಹಿಂದು ಧರ್ಮದ ಸಂಸ್ಕೃತಿಯನ್ನು ಮಕ್ಕಳಿಗೆ ಪ್ರಥಮವಾಗಿ ಹೇಳಿಕೊಡಲೇಬೇಕು. ಅಂತಹ ಕೆಲಸಗಳನ್ನು ಶಿಶುಮಂದಿರಗಳು ಮಾಡುತ್ತಿರುವು ಶ್ಲಾಘನೀಯ ಎಂದರು.

Advertisement

ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಿ.ಎಸ್ ಚಿದಾನಂದ ರಾವ್ ಪುಸ್ತಕಗಳು ಮನುಷ್ಯನ ನಿಜವಾದ ಮಿತ್ರ. ವಿಷಯಗಳು ಪುಸ್ತಕದ ಮೂಲದಲ್ಲಿದ್ದರೆ ಜನರ ಮನಸ್ಸಿನಲ್ಲಿ ದೀರ್ಘ ಸಮಯ ಉಳಿದಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವೈದಿಕ ಕ್ಷೇತ್ರದಲ್ಲಿ ಸಾಧನೆಗೈದಿರುವ ಚೂಂತಾರು ವೇ|ಮೂ ಶಿವಪ್ರಸಾದ್ ಭಟ್ ಹಾಗೂ ಜಿಲ್ಲಾ ಕೃಷಿ ಪಂಡಿತ ಪುರಸ್ಕೃತ ವಿವೇಕ್ ಆಳ್ವ ಅವರನ್ನು ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾದ ಶಶಿಕಿರಣ್ ಎಂಬವರಿಗೆ ಟ್ರಸ್ಟ್ ವತಿಯಿಂದ ಹನ್ನೊಂದು ಸಾವಿರ ರೂಪಾಯಿಗಳ ಸಹಾಯ ಧನ ವಿತರಿಸಲಾಯಿತು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ದಶಮಾನೋತ್ಸವ ಸಮಿತಿಯ ಅಧ್ಯಕ್ಷ  ಬಿ.ಸುಬ್ರಹ್ಮಣ್ಯ ಜೋಶಿ ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್‍ಕುಮಾರ್ ರೈ ಪುಡ್ಕಜೆ, ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಉಪಸ್ಥಿತರಿದ್ದರು. ಕೇಶವಮೂರ್ತಿ ಕಾವಿನಮೂಲೆ ವಂದಿಸಿದರು.  ತೇಜೇಶ್ವರಿ ವಾರ್ಷಿಕ ವರದಿ ವಾಚಿಸಿದರು. ಪ್ರದೀಪ್‍ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ : ಗಿಡ/ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚುತ್ತೆ..

ಈ ವಿಡಿಯೋ ನೋಡಿ. ಸುಡುಮಣ್ಣೂ ಆಯ್ತು, ಕಸಗಳ ವಿಲೇವಾರಿಯೂ ಆಯ್ತು ಎಂದು ತೋಟದ…

3 hours ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |

ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…

4 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

5 hours ago

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…

5 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

7 hours ago