ಬೆಳ್ಳಾರೆ: ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಪದವಿ ಕೇಂದ್ರ ಬೆಳ್ಳಾರೆಯಲ್ಲಿ ಭಾರತೀಯ ಅಂಚೆ ಇಲಾಖೆ, ಸುಳ್ಯ ಉಪವಿಭಾಗ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಿಯ ಪೋಸ್ಟ್ ಪೆಮೆಂಟ್ ಬ್ಯಾಂಕ್ ಖಾತೆ ತೆರೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 77 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪುತ್ತೂರು ಹಿರಿಯ ಅಂಚೆ ಅಧೀಕ್ಷಕ ಜಗದೀಶ್ ಪೈ, ಸುಳ್ಯ ಉಪವಿಭಾಗದ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ ಬಿ, ಅಂಚೆ ಮೇಲ್ವಿಚಾರಕ ಆನಂದ ಗೌಡ, ಐಪಿಪಿಬಿಯ ಬೇಬಿ, ಅಂಚೆ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕರು ಇದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಮೂಲಕವೇ ಪಾವತಿಸಲು ಕಾಲೇಜು ನಿರ್ದೇಶನಾಲಯ ಇತ್ತೀಚಿಗೆ ನಿರ್ದೇಶನ ನೀಡಿದೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…