ಬೆಳ್ಳಾರೆ: ಸಾರ್ವಜನಿಕ ಸಾಂಸ್ಕøತಿಕ ಗಣೇಶೋತ್ಸವ ಸಮಿತಿ ಹಾಗು ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ಇದರ ಜಂಟಿ ಆಯೋಜನೆಯಲ್ಲಿ 48ನೇ ವರ್ಷದ ಗಣೇಶೋತ್ಸವ ಸೆ.02ರಿಂದ ಸೆ.3ರವರೆಗೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ನಡೆಯಲಿದೆ.
ಸೆ.2ರಂದು ಪ್ರಾತಃ ಕಾಲದಲ್ಲಿ ಗಣಪತಿ ಪ್ರತಿಷ್ಠ ಹಾಗು ಹೋಮ ನಡೆಯಲಿದೆ. ನಂತರವಿವಿಧ ಸ್ಪರ್ಧೆಗಳು, ದೇವರ ಪ್ರಸಾದ ಸ್ವೀಕಾರ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6ಗಂಟೆಯ ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಶ್ವ ಹಿಂದೂ ಪರಿಷತ್ನ ಖ್ಯಾತ ಮುಖಂಡ ಸತ್ಯಜಿತ್ ಸುರತ್ಕಲ್ ಪ್ರಧಾನ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದಲ್ಲಿ ಪ್ರೈಮ್ ಟಿ.ವಿ ನಿರ್ದೇಶಕ ರೂಪೇಶ್.ವಿ ಕಲ್ಮಾಡಿ, ಜಿಲ್ಲಾ ಪಂಚಾಯತ್ ಅರಂತೋಡು ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಸೇರಿದಂತೆ ಅನೇಕ ಖ್ಯಾತನಾಮರು ಉಪಸ್ಥಿತರಾಗಲಿದ್ದಾರೆ.
ರಾತ್ರಿ 8.30ರ ನಂತರ ತುಳುನಾಡ ಖ್ಯಾತ ಕಲಾ ಬಿರ್ಸೆ ದೀಪಕ್ ರೈ ಪಾಣಾಜೆ ಅಭಿನಯದ ಮಂಜೇಶ್ವರ ಶಾರದಾ ಆಟ್ರ್ಸ್ ಕಲಾವಿದರ ತಂಡದಿಂದ ಹಾಸ್ಯ ಪ್ರಧಾನವದ ಉತ್ತರ ಕೊರ್ಲೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕ ಅಶೋಕ್ ಪಾಟಾಳಿ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…