ಬೆಳ್ಳಾರೆ: ಸಾರ್ವಜನಿಕ ಸಾಂಸ್ಕøತಿಕ ಗಣೇಶೋತ್ಸವ ಸಮಿತಿ ಹಾಗು ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ಇದರ ಜಂಟಿ ಆಯೋಜನೆಯಲ್ಲಿ 48ನೇ ವರ್ಷದ ಗಣೇಶೋತ್ಸವ ಸೆ.02ರಿಂದ ಸೆ.3ರವರೆಗೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ನಡೆಯಲಿದೆ.
ಸೆ.2ರಂದು ಪ್ರಾತಃ ಕಾಲದಲ್ಲಿ ಗಣಪತಿ ಪ್ರತಿಷ್ಠ ಹಾಗು ಹೋಮ ನಡೆಯಲಿದೆ. ನಂತರವಿವಿಧ ಸ್ಪರ್ಧೆಗಳು, ದೇವರ ಪ್ರಸಾದ ಸ್ವೀಕಾರ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6ಗಂಟೆಯ ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಶ್ವ ಹಿಂದೂ ಪರಿಷತ್ನ ಖ್ಯಾತ ಮುಖಂಡ ಸತ್ಯಜಿತ್ ಸುರತ್ಕಲ್ ಪ್ರಧಾನ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದಲ್ಲಿ ಪ್ರೈಮ್ ಟಿ.ವಿ ನಿರ್ದೇಶಕ ರೂಪೇಶ್.ವಿ ಕಲ್ಮಾಡಿ, ಜಿಲ್ಲಾ ಪಂಚಾಯತ್ ಅರಂತೋಡು ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಸೇರಿದಂತೆ ಅನೇಕ ಖ್ಯಾತನಾಮರು ಉಪಸ್ಥಿತರಾಗಲಿದ್ದಾರೆ.
ರಾತ್ರಿ 8.30ರ ನಂತರ ತುಳುನಾಡ ಖ್ಯಾತ ಕಲಾ ಬಿರ್ಸೆ ದೀಪಕ್ ರೈ ಪಾಣಾಜೆ ಅಭಿನಯದ ಮಂಜೇಶ್ವರ ಶಾರದಾ ಆಟ್ರ್ಸ್ ಕಲಾವಿದರ ತಂಡದಿಂದ ಹಾಸ್ಯ ಪ್ರಧಾನವದ ಉತ್ತರ ಕೊರ್ಲೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕ ಅಶೋಕ್ ಪಾಟಾಳಿ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…