ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.
ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…