ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.
ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…