ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.
ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…