ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.
ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…