ಸುಳ್ಯ: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಮೂರು ದಿನಗಳಿಂದ ಆನೆ ಹಾವಳಿ ನಡೆಸಿದೆ.
ಆನೆಗಳ ಹಿಂಡು ಮಂಗಳವಾರ ರಾತ್ರಿಯೂ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ. ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…