ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ

April 27, 2019
12:24 PM

ಸೋಣಂಗೇರಿ: ಸುಳ್ಯ-ಬೆಳ್ಳಾರೆ ರಸ್ತೆಯ ಸೋಣಂಗೇರಿ ಸಮೀಪದ ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ ಹಾಗೂ ತ್ಯಾಜ್ಯ ಮತ್ತೆ ಕಾಣಿಸಿಕೊಂಡು ಈಗ ತ್ಯಾಜ್ಯ ಘಟಕ ನಿರ್ಮಾಣವಾಗಿದೆ.

Advertisement
Advertisement

ರಸ್ತೆಯ ಎರಡೂ ಕಡೆಗಳಲ್ಲಿ ಕೋಳಿ ತ್ಯಾಜ್ಯ, ಬಿಯರ್ ಬಾಟಲ್, ಪ್ಲಾಸ್ಟಿಕ್ ಬಾಟಲ್ ಹಾಗೂ ಇತರ ತಾಜ್ಯಗಳು ರಾಶಿ ಬಿದ್ದಿದ್ದು ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಮೂಗು ಮುಚ್ಚಿಕೊಂಡೇ ಹೋಗಬೇಕಾದ ಅನಿವಾರ್ಯತೆ ಬಂದಿದೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಕೋಳಿ ತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಎಸೆಯುತ್ತಿದ್ದರು. ಕೆಲ ತಿಂಗಳ ಹಿಂದೆ ಈ ಪ್ರದೇಶವನ್ನು ಸ್ಥಳೀಯಾಡಳಿತ ಹಾಗೂ ಸಂಘ ಸಂಸ್ಥೆಗಳು ಜಂಟಿಯಾಗಿ ಸ್ವಚ್ಛಗೊಳಿಸಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳುವ ಸೂಚನಾ ಫಲಕವನ್ನೂ ಹಾಕಲಾಗಿತ್ತು. ಇದಾದ ಬಳಿಕ ಈ ಪ್ರದೇಶದಲ್ಲಿ ತ್ಯಾಜ್ಯ ಎಸೆತ ಕಡಿಮೆಯಾಗಿತ್ತಾದರೂ ಇದೀಗ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಗೊಂಡಿದೆ.

ಸ್ವಚ್ಚ ಭಾರತದ ಪರಿಕಲ್ಪನೆಯಲ್ಲಿ ದೇಶ ಸಾಗುತ್ತಿರುವಾಗ ಮತ್ತೆ ತ್ಯಾಜ್ಯ ಹಾಕುತ್ತಿರುವುದು ಕೆಲ ನಾಗರಿಕರ ಮನಸ್ಥಿತಿಯ ಕೈಗನ್ನಡಿಯಾಗಿದೆ. ಪ್ರಜ್ಞಾವಂತ ನಾಗರಿಕರು ಈ ಸಮಸ್ಯೆ ಉಲ್ಬಣಿಸದಂತೆ ತಡೆಯಬೇಕಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ
May 30, 2025
11:14 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group