ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ

April 27, 2019
12:24 PM

ಸೋಣಂಗೇರಿ: ಸುಳ್ಯ-ಬೆಳ್ಳಾರೆ ರಸ್ತೆಯ ಸೋಣಂಗೇರಿ ಸಮೀಪದ ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ ಹಾಗೂ ತ್ಯಾಜ್ಯ ಮತ್ತೆ ಕಾಣಿಸಿಕೊಂಡು ಈಗ ತ್ಯಾಜ್ಯ ಘಟಕ ನಿರ್ಮಾಣವಾಗಿದೆ.

ರಸ್ತೆಯ ಎರಡೂ ಕಡೆಗಳಲ್ಲಿ ಕೋಳಿ ತ್ಯಾಜ್ಯ, ಬಿಯರ್ ಬಾಟಲ್, ಪ್ಲಾಸ್ಟಿಕ್ ಬಾಟಲ್ ಹಾಗೂ ಇತರ ತಾಜ್ಯಗಳು ರಾಶಿ ಬಿದ್ದಿದ್ದು ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಮೂಗು ಮುಚ್ಚಿಕೊಂಡೇ ಹೋಗಬೇಕಾದ ಅನಿವಾರ್ಯತೆ ಬಂದಿದೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಕೋಳಿ ತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಎಸೆಯುತ್ತಿದ್ದರು. ಕೆಲ ತಿಂಗಳ ಹಿಂದೆ ಈ ಪ್ರದೇಶವನ್ನು ಸ್ಥಳೀಯಾಡಳಿತ ಹಾಗೂ ಸಂಘ ಸಂಸ್ಥೆಗಳು ಜಂಟಿಯಾಗಿ ಸ್ವಚ್ಛಗೊಳಿಸಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳುವ ಸೂಚನಾ ಫಲಕವನ್ನೂ ಹಾಕಲಾಗಿತ್ತು. ಇದಾದ ಬಳಿಕ ಈ ಪ್ರದೇಶದಲ್ಲಿ ತ್ಯಾಜ್ಯ ಎಸೆತ ಕಡಿಮೆಯಾಗಿತ್ತಾದರೂ ಇದೀಗ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಗೊಂಡಿದೆ.

ಸ್ವಚ್ಚ ಭಾರತದ ಪರಿಕಲ್ಪನೆಯಲ್ಲಿ ದೇಶ ಸಾಗುತ್ತಿರುವಾಗ ಮತ್ತೆ ತ್ಯಾಜ್ಯ ಹಾಕುತ್ತಿರುವುದು ಕೆಲ ನಾಗರಿಕರ ಮನಸ್ಥಿತಿಯ ಕೈಗನ್ನಡಿಯಾಗಿದೆ. ಪ್ರಜ್ಞಾವಂತ ನಾಗರಿಕರು ಈ ಸಮಸ್ಯೆ ಉಲ್ಬಣಿಸದಂತೆ ತಡೆಯಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror