ಸೋಣಂಗೇರಿ: ಸುಳ್ಯ-ಬೆಳ್ಳಾರೆ ರಸ್ತೆಯ ಸೋಣಂಗೇರಿ ಸಮೀಪದ ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ ಹಾಗೂ ತ್ಯಾಜ್ಯ ಮತ್ತೆ ಕಾಣಿಸಿಕೊಂಡು ಈಗ ತ್ಯಾಜ್ಯ ಘಟಕ ನಿರ್ಮಾಣವಾಗಿದೆ.
ರಸ್ತೆಯ ಎರಡೂ ಕಡೆಗಳಲ್ಲಿ ಕೋಳಿ ತ್ಯಾಜ್ಯ, ಬಿಯರ್ ಬಾಟಲ್, ಪ್ಲಾಸ್ಟಿಕ್ ಬಾಟಲ್ ಹಾಗೂ ಇತರ ತಾಜ್ಯಗಳು ರಾಶಿ ಬಿದ್ದಿದ್ದು ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಮೂಗು ಮುಚ್ಚಿಕೊಂಡೇ ಹೋಗಬೇಕಾದ ಅನಿವಾರ್ಯತೆ ಬಂದಿದೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಕೋಳಿ ತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಎಸೆಯುತ್ತಿದ್ದರು. ಕೆಲ ತಿಂಗಳ ಹಿಂದೆ ಈ ಪ್ರದೇಶವನ್ನು ಸ್ಥಳೀಯಾಡಳಿತ ಹಾಗೂ ಸಂಘ ಸಂಸ್ಥೆಗಳು ಜಂಟಿಯಾಗಿ ಸ್ವಚ್ಛಗೊಳಿಸಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳುವ ಸೂಚನಾ ಫಲಕವನ್ನೂ ಹಾಕಲಾಗಿತ್ತು. ಇದಾದ ಬಳಿಕ ಈ ಪ್ರದೇಶದಲ್ಲಿ ತ್ಯಾಜ್ಯ ಎಸೆತ ಕಡಿಮೆಯಾಗಿತ್ತಾದರೂ ಇದೀಗ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಗೊಂಡಿದೆ.
ಸ್ವಚ್ಚ ಭಾರತದ ಪರಿಕಲ್ಪನೆಯಲ್ಲಿ ದೇಶ ಸಾಗುತ್ತಿರುವಾಗ ಮತ್ತೆ ತ್ಯಾಜ್ಯ ಹಾಕುತ್ತಿರುವುದು ಕೆಲ ನಾಗರಿಕರ ಮನಸ್ಥಿತಿಯ ಕೈಗನ್ನಡಿಯಾಗಿದೆ. ಪ್ರಜ್ಞಾವಂತ ನಾಗರಿಕರು ಈ ಸಮಸ್ಯೆ ಉಲ್ಬಣಿಸದಂತೆ ತಡೆಯಬೇಕಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…