Advertisement
ಯಕ್ಷಗಾನ : ಮಾತು-ಮಸೆತ

‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ…..

Share

ಪಾರಂಪರಿಕವಾಗಿ ತಲೆಮಾರಿಂದ ತಲೆಮಾರಿಗೆ ಹರಿದು ಬಂದ ಯಕ್ಷಗಾನದ ಅರ್ಥಗಾರಿಕೆಯು ಕನ್ನಡ ಸಾಹಿತ್ಯಕ್ಕೆ ದೊಡ್ಡ ಅಲಿಖಿತ ಕೊಡುಗೆ ನೀಡಿದೆ. ಡಾ.ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ್ ಮಲ್ಪೆ ಶಂಕರನಾರಾಯಣ ಸಾಮಗ, ಹರಿದಾಸ್ ಮಲ್ಪೆ ರಾಮದಾಸ ಸಾಮಗರು, ಕವಿಭೂಷಣ ವೆಂಕಪ್ಪ ಶೆಟ್ಟರು, ವಿದ್ವಾನ್ ಕಾಂತ ರೈ… ಅಲ್ಲದೆ ಇವರಿಂದಲೂ ಹಿಂದಿನ ಅನೇಕ ಉದ್ಧಾಮರು ಅರ್ಥಗಾರಿಕೆಗೆ ಹೊಸ ಹೊಳಹನ್ನು ನೀಡಿದ್ದಾರೆ. ಆ ಕಾಲಘಟ್ಟದಲ್ಲಿ ಅವರ ಅರ್ಥಗಾರಿಕೆಯನ್ನು ದಾಖಲಿಸುವ ತಂತ್ರಜ್ಞಾನಗಳು ವಿರಳ. ಸಾಮಾನ್ಯವಾಗಿ 2000ರ ಈಚೆಗೆ ಧ್ವನಿಮುದ್ರಿಕೆ, ವೀಡಿಯೋ ತಂತ್ರಜ್ಞಾನಗಳು ಅಭಿವೃದ್ಧಿಯಾದುವು. ಹಾಗಾಗಿ ಹಿರಿಯ ಅರ್ಥದಾರಿಗಳ ಅರ್ಥಗಾರಿಕೆಯ ಸೊಗಸು, ಸೊಬಗು ಮಾತಿಗೆ ಮಾತ್ರ ವಸ್ತುವಾಗಿದೆಯಷ್ಟೇ. ಈ ಹಿನ್ನೆಲೆಯಲ್ಲಿ ಹಿರಿಯರ ಅರ್ಥಗಾರಿಕೆಯ ‘ಝಲಕ್’ ನಿಮಗಾಗಿ ಇಂದಿನಿಂದ…..

 

ಶೇಣಿ ಗೋಪಾಲಕೃಷ್ಣ ಭಟ್ಟರ ‘ದೂರ್ವಾಸ’ ಮುನಿ.
(ಪ್ರಸಂಗ : ದೂರ್ವಾಸಾತಿಥ್ಯ)

ಸಂದರ್ಭ : ಮುನಿಯು ಕೌರವನ ಅಸ್ಥಾನಕ್ಕೆ ಬಂದಾಗ…..

“..ಮೃಷ್ಟಾನ್ನ ಭೋಜನದಿಂದ ನನ್ನನ್ನು, ನನ್ನ ಪರಿವಾರದವರನ್ನು ತಣಿಸು. ಇನ್ನೂ ಒಂದು ತಾತ್ವಿಕ ಹಿನ್ನೆಲೆಯಿದೆ. ನನ್ನಂತಹವರಿಗೆ ಮೂಡುವ ಹಸಿವೆ ಅಪರೂಪದ್ದು. ಹೇಳಿಕೇಳಿ ರುದ್ರಾಂಶ ಸಂಭೂತ ನಾನು. ಪ್ರತ್ಯಕ್ಷವಾಗಿ ಶಿವನಂತೆ ನಿನ್ನ ಮುಂದೆ ಗುರುಭೂತವಾಗಿ ಬಂದಿರುವಾಗ, ನನ್ನ ಹೊಟ್ಟೆಯ ಹಸಿವು ತಣಿಸಲ್ಪಟ್ಟರೆ, ಬಹುಶಃ ಎಲ್ಲಾ ಭೂತಗಳ ಪ್ರಾತಿನಿಧ್ಯವನ್ನು ವಹಿಸಿದ ಮಾತ್ರವಲ್ಲ, ಸರ್ವಸ್ವದಲ್ಲೂ ಅಖಂಡ ನಾನು ಅಂತ ತಿಳಿದ ನನ್ನ ಚಿತ್ತವೃತ್ತಿಗೆ, ನನ್ನ ಮನೋವೃತ್ತಿಗೆ ಸಂದಾಗ ಅದು ಬಹುಶಃ ಎಲ್ಲರಿಗೂ ಮುಟ್ಟುತ್ತದೆ…
ಈ ಪ್ರಪಂಚದಲ್ಲಿ ಯಾವ ಜೀವಿಯ ಮನಸ್ಸನ್ನು ತುಂಬ ತೃಪ್ತಿಪಡಿಸಲಿಕ್ಕಾಗುವುದಿಲ್ಲ. ಮನಸ್ಸು ‘ಬೇಕು’ ಅಂತ ಹೇಳುತ್ತದೆ. ‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ. ಈ ಬೇಕುಗಳ ಸರಮಾಲೆಯಿಂದ ಜೀವರನ್ನು ಹೊರಕ್ಕೆ ಎಳೆದು ತಂದು ಅವರ ಪ್ರಾಣಕ್ಕೆ ತುಂಬಿ ತುಂಬಾ ಅನ್ನವನ್ನಿಟ್ಟೆವು ಅಂತಾದರೆ, ಆಗ ವಿರೋಧಿಯಾದರೂ, ‘ಸಾಕು ಸಾಕು’ ಅಂತ ಹೇಳುತ್ತಾನೆ. ಏನು ಕೊಟ್ಟರೂ ಮನುಷ್ಯನ ಬಾಯಿಂದ ‘ಸಾಕು’ ಅಂತ ಹೇಳಿಸುವುದು ಕಷ್ಟ. ಊಟ ಇಕ್ಕಿ ನೋಡು, ‘ಸಾಕು ಸಾಕು’ ಅಂತ ಹೇಳದೆ ಒಬ್ಬನೂ ಇರುವುದಿಲ್ಲ. ಆದರೆ ದುರಾತ್ಮರು ‘ಸಾಕು ಸಾಕು’ ಅನ್ನಿಸುವುದಕ್ಕೆ ದಂಡನೀತಿಯನ್ನೇ ಉಪಯೋಗಿಸುತ್ತಾರೆ. ಅಂತಹ ದಂಡನೀತಿ ಸ್ಥಾಯಿಯಾಗಿ, ಶಾಶ್ವತವಾಗಿ ಯಾರಿಗೂ ಸುಖವನ್ನು ಕೊಡುವುದಿಲ್ಲ. ಉಂಡವನು ಹರಸಬೇಕಾಗಿಲ್ಲ. ಉಂಡವನು ತೇಗಿದರೆ ಅದುವೇ ಆಶೀರ್ವಾದ..”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

View Comments

  • ಉತ್ತಮ ಕೃಕರ್ಯ.ಈ ಕಾರ್ಯ ಇನ್ನಷ್ಟು ಮುಂದುವರಿಯಲಿ.

Published by
ನಾ.ಕಾರಂತ ಪೆರಾಜೆ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

7 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

18 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

20 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago