ಯಕ್ಷಗಾನ : ಮಾತು-ಮಸೆತ

‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಾರಂಪರಿಕವಾಗಿ ತಲೆಮಾರಿಂದ ತಲೆಮಾರಿಗೆ ಹರಿದು ಬಂದ ಯಕ್ಷಗಾನದ ಅರ್ಥಗಾರಿಕೆಯು ಕನ್ನಡ ಸಾಹಿತ್ಯಕ್ಕೆ ದೊಡ್ಡ ಅಲಿಖಿತ ಕೊಡುಗೆ ನೀಡಿದೆ. ಡಾ.ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ್ ಮಲ್ಪೆ ಶಂಕರನಾರಾಯಣ ಸಾಮಗ, ಹರಿದಾಸ್ ಮಲ್ಪೆ ರಾಮದಾಸ ಸಾಮಗರು, ಕವಿಭೂಷಣ ವೆಂಕಪ್ಪ ಶೆಟ್ಟರು, ವಿದ್ವಾನ್ ಕಾಂತ ರೈ… ಅಲ್ಲದೆ ಇವರಿಂದಲೂ ಹಿಂದಿನ ಅನೇಕ ಉದ್ಧಾಮರು ಅರ್ಥಗಾರಿಕೆಗೆ ಹೊಸ ಹೊಳಹನ್ನು ನೀಡಿದ್ದಾರೆ. ಆ ಕಾಲಘಟ್ಟದಲ್ಲಿ ಅವರ ಅರ್ಥಗಾರಿಕೆಯನ್ನು ದಾಖಲಿಸುವ ತಂತ್ರಜ್ಞಾನಗಳು ವಿರಳ. ಸಾಮಾನ್ಯವಾಗಿ 2000ರ ಈಚೆಗೆ ಧ್ವನಿಮುದ್ರಿಕೆ, ವೀಡಿಯೋ ತಂತ್ರಜ್ಞಾನಗಳು ಅಭಿವೃದ್ಧಿಯಾದುವು. ಹಾಗಾಗಿ ಹಿರಿಯ ಅರ್ಥದಾರಿಗಳ ಅರ್ಥಗಾರಿಕೆಯ ಸೊಗಸು, ಸೊಬಗು ಮಾತಿಗೆ ಮಾತ್ರ ವಸ್ತುವಾಗಿದೆಯಷ್ಟೇ. ಈ ಹಿನ್ನೆಲೆಯಲ್ಲಿ ಹಿರಿಯರ ಅರ್ಥಗಾರಿಕೆಯ ‘ಝಲಕ್’ ನಿಮಗಾಗಿ ಇಂದಿನಿಂದ…..

Advertisement
Advertisement

 

ಶೇಣಿ ಗೋಪಾಲಕೃಷ್ಣ ಭಟ್ಟರ ‘ದೂರ್ವಾಸ’ ಮುನಿ.
(ಪ್ರಸಂಗ : ದೂರ್ವಾಸಾತಿಥ್ಯ)

ಸಂದರ್ಭ : ಮುನಿಯು ಕೌರವನ ಅಸ್ಥಾನಕ್ಕೆ ಬಂದಾಗ…..

“..ಮೃಷ್ಟಾನ್ನ ಭೋಜನದಿಂದ ನನ್ನನ್ನು, ನನ್ನ ಪರಿವಾರದವರನ್ನು ತಣಿಸು. ಇನ್ನೂ ಒಂದು ತಾತ್ವಿಕ ಹಿನ್ನೆಲೆಯಿದೆ. ನನ್ನಂತಹವರಿಗೆ ಮೂಡುವ ಹಸಿವೆ ಅಪರೂಪದ್ದು. ಹೇಳಿಕೇಳಿ ರುದ್ರಾಂಶ ಸಂಭೂತ ನಾನು. ಪ್ರತ್ಯಕ್ಷವಾಗಿ ಶಿವನಂತೆ ನಿನ್ನ ಮುಂದೆ ಗುರುಭೂತವಾಗಿ ಬಂದಿರುವಾಗ, ನನ್ನ ಹೊಟ್ಟೆಯ ಹಸಿವು ತಣಿಸಲ್ಪಟ್ಟರೆ, ಬಹುಶಃ ಎಲ್ಲಾ ಭೂತಗಳ ಪ್ರಾತಿನಿಧ್ಯವನ್ನು ವಹಿಸಿದ ಮಾತ್ರವಲ್ಲ, ಸರ್ವಸ್ವದಲ್ಲೂ ಅಖಂಡ ನಾನು ಅಂತ ತಿಳಿದ ನನ್ನ ಚಿತ್ತವೃತ್ತಿಗೆ, ನನ್ನ ಮನೋವೃತ್ತಿಗೆ ಸಂದಾಗ ಅದು ಬಹುಶಃ ಎಲ್ಲರಿಗೂ ಮುಟ್ಟುತ್ತದೆ…
ಈ ಪ್ರಪಂಚದಲ್ಲಿ ಯಾವ ಜೀವಿಯ ಮನಸ್ಸನ್ನು ತುಂಬ ತೃಪ್ತಿಪಡಿಸಲಿಕ್ಕಾಗುವುದಿಲ್ಲ. ಮನಸ್ಸು ‘ಬೇಕು’ ಅಂತ ಹೇಳುತ್ತದೆ. ‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ. ಈ ಬೇಕುಗಳ ಸರಮಾಲೆಯಿಂದ ಜೀವರನ್ನು ಹೊರಕ್ಕೆ ಎಳೆದು ತಂದು ಅವರ ಪ್ರಾಣಕ್ಕೆ ತುಂಬಿ ತುಂಬಾ ಅನ್ನವನ್ನಿಟ್ಟೆವು ಅಂತಾದರೆ, ಆಗ ವಿರೋಧಿಯಾದರೂ, ‘ಸಾಕು ಸಾಕು’ ಅಂತ ಹೇಳುತ್ತಾನೆ. ಏನು ಕೊಟ್ಟರೂ ಮನುಷ್ಯನ ಬಾಯಿಂದ ‘ಸಾಕು’ ಅಂತ ಹೇಳಿಸುವುದು ಕಷ್ಟ. ಊಟ ಇಕ್ಕಿ ನೋಡು, ‘ಸಾಕು ಸಾಕು’ ಅಂತ ಹೇಳದೆ ಒಬ್ಬನೂ ಇರುವುದಿಲ್ಲ. ಆದರೆ ದುರಾತ್ಮರು ‘ಸಾಕು ಸಾಕು’ ಅನ್ನಿಸುವುದಕ್ಕೆ ದಂಡನೀತಿಯನ್ನೇ ಉಪಯೋಗಿಸುತ್ತಾರೆ. ಅಂತಹ ದಂಡನೀತಿ ಸ್ಥಾಯಿಯಾಗಿ, ಶಾಶ್ವತವಾಗಿ ಯಾರಿಗೂ ಸುಖವನ್ನು ಕೊಡುವುದಿಲ್ಲ. ಉಂಡವನು ಹರಸಬೇಕಾಗಿಲ್ಲ. ಉಂಡವನು ತೇಗಿದರೆ ಅದುವೇ ಆಶೀರ್ವಾದ..”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

View Comments

  • ಉತ್ತಮ ಕೃಕರ್ಯ.ಈ ಕಾರ್ಯ ಇನ್ನಷ್ಟು ಮುಂದುವರಿಯಲಿ.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

50 minutes ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

7 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

7 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

8 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

8 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago