Advertisement
ಯಕ್ಷಗಾನ : ಮಾತು-ಮಸೆತ

‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ…..

Share

ಪಾರಂಪರಿಕವಾಗಿ ತಲೆಮಾರಿಂದ ತಲೆಮಾರಿಗೆ ಹರಿದು ಬಂದ ಯಕ್ಷಗಾನದ ಅರ್ಥಗಾರಿಕೆಯು ಕನ್ನಡ ಸಾಹಿತ್ಯಕ್ಕೆ ದೊಡ್ಡ ಅಲಿಖಿತ ಕೊಡುಗೆ ನೀಡಿದೆ. ಡಾ.ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ್ ಮಲ್ಪೆ ಶಂಕರನಾರಾಯಣ ಸಾಮಗ, ಹರಿದಾಸ್ ಮಲ್ಪೆ ರಾಮದಾಸ ಸಾಮಗರು, ಕವಿಭೂಷಣ ವೆಂಕಪ್ಪ ಶೆಟ್ಟರು, ವಿದ್ವಾನ್ ಕಾಂತ ರೈ… ಅಲ್ಲದೆ ಇವರಿಂದಲೂ ಹಿಂದಿನ ಅನೇಕ ಉದ್ಧಾಮರು ಅರ್ಥಗಾರಿಕೆಗೆ ಹೊಸ ಹೊಳಹನ್ನು ನೀಡಿದ್ದಾರೆ. ಆ ಕಾಲಘಟ್ಟದಲ್ಲಿ ಅವರ ಅರ್ಥಗಾರಿಕೆಯನ್ನು ದಾಖಲಿಸುವ ತಂತ್ರಜ್ಞಾನಗಳು ವಿರಳ. ಸಾಮಾನ್ಯವಾಗಿ 2000ರ ಈಚೆಗೆ ಧ್ವನಿಮುದ್ರಿಕೆ, ವೀಡಿಯೋ ತಂತ್ರಜ್ಞಾನಗಳು ಅಭಿವೃದ್ಧಿಯಾದುವು. ಹಾಗಾಗಿ ಹಿರಿಯ ಅರ್ಥದಾರಿಗಳ ಅರ್ಥಗಾರಿಕೆಯ ಸೊಗಸು, ಸೊಬಗು ಮಾತಿಗೆ ಮಾತ್ರ ವಸ್ತುವಾಗಿದೆಯಷ್ಟೇ. ಈ ಹಿನ್ನೆಲೆಯಲ್ಲಿ ಹಿರಿಯರ ಅರ್ಥಗಾರಿಕೆಯ ‘ಝಲಕ್’ ನಿಮಗಾಗಿ ಇಂದಿನಿಂದ…..

Advertisement
Advertisement

 

Advertisement

ಶೇಣಿ ಗೋಪಾಲಕೃಷ್ಣ ಭಟ್ಟರ ‘ದೂರ್ವಾಸ’ ಮುನಿ.
(ಪ್ರಸಂಗ : ದೂರ್ವಾಸಾತಿಥ್ಯ)

ಸಂದರ್ಭ : ಮುನಿಯು ಕೌರವನ ಅಸ್ಥಾನಕ್ಕೆ ಬಂದಾಗ…..

Advertisement

“..ಮೃಷ್ಟಾನ್ನ ಭೋಜನದಿಂದ ನನ್ನನ್ನು, ನನ್ನ ಪರಿವಾರದವರನ್ನು ತಣಿಸು. ಇನ್ನೂ ಒಂದು ತಾತ್ವಿಕ ಹಿನ್ನೆಲೆಯಿದೆ. ನನ್ನಂತಹವರಿಗೆ ಮೂಡುವ ಹಸಿವೆ ಅಪರೂಪದ್ದು. ಹೇಳಿಕೇಳಿ ರುದ್ರಾಂಶ ಸಂಭೂತ ನಾನು. ಪ್ರತ್ಯಕ್ಷವಾಗಿ ಶಿವನಂತೆ ನಿನ್ನ ಮುಂದೆ ಗುರುಭೂತವಾಗಿ ಬಂದಿರುವಾಗ, ನನ್ನ ಹೊಟ್ಟೆಯ ಹಸಿವು ತಣಿಸಲ್ಪಟ್ಟರೆ, ಬಹುಶಃ ಎಲ್ಲಾ ಭೂತಗಳ ಪ್ರಾತಿನಿಧ್ಯವನ್ನು ವಹಿಸಿದ ಮಾತ್ರವಲ್ಲ, ಸರ್ವಸ್ವದಲ್ಲೂ ಅಖಂಡ ನಾನು ಅಂತ ತಿಳಿದ ನನ್ನ ಚಿತ್ತವೃತ್ತಿಗೆ, ನನ್ನ ಮನೋವೃತ್ತಿಗೆ ಸಂದಾಗ ಅದು ಬಹುಶಃ ಎಲ್ಲರಿಗೂ ಮುಟ್ಟುತ್ತದೆ…
ಈ ಪ್ರಪಂಚದಲ್ಲಿ ಯಾವ ಜೀವಿಯ ಮನಸ್ಸನ್ನು ತುಂಬ ತೃಪ್ತಿಪಡಿಸಲಿಕ್ಕಾಗುವುದಿಲ್ಲ. ಮನಸ್ಸು ‘ಬೇಕು’ ಅಂತ ಹೇಳುತ್ತದೆ. ‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ. ಈ ಬೇಕುಗಳ ಸರಮಾಲೆಯಿಂದ ಜೀವರನ್ನು ಹೊರಕ್ಕೆ ಎಳೆದು ತಂದು ಅವರ ಪ್ರಾಣಕ್ಕೆ ತುಂಬಿ ತುಂಬಾ ಅನ್ನವನ್ನಿಟ್ಟೆವು ಅಂತಾದರೆ, ಆಗ ವಿರೋಧಿಯಾದರೂ, ‘ಸಾಕು ಸಾಕು’ ಅಂತ ಹೇಳುತ್ತಾನೆ. ಏನು ಕೊಟ್ಟರೂ ಮನುಷ್ಯನ ಬಾಯಿಂದ ‘ಸಾಕು’ ಅಂತ ಹೇಳಿಸುವುದು ಕಷ್ಟ. ಊಟ ಇಕ್ಕಿ ನೋಡು, ‘ಸಾಕು ಸಾಕು’ ಅಂತ ಹೇಳದೆ ಒಬ್ಬನೂ ಇರುವುದಿಲ್ಲ. ಆದರೆ ದುರಾತ್ಮರು ‘ಸಾಕು ಸಾಕು’ ಅನ್ನಿಸುವುದಕ್ಕೆ ದಂಡನೀತಿಯನ್ನೇ ಉಪಯೋಗಿಸುತ್ತಾರೆ. ಅಂತಹ ದಂಡನೀತಿ ಸ್ಥಾಯಿಯಾಗಿ, ಶಾಶ್ವತವಾಗಿ ಯಾರಿಗೂ ಸುಖವನ್ನು ಕೊಡುವುದಿಲ್ಲ. ಉಂಡವನು ಹರಸಬೇಕಾಗಿಲ್ಲ. ಉಂಡವನು ತೇಗಿದರೆ ಅದುವೇ ಆಶೀರ್ವಾದ..”

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ

View Comments

  • ಉತ್ತಮ ಕೃಕರ್ಯ.ಈ ಕಾರ್ಯ ಇನ್ನಷ್ಟು ಮುಂದುವರಿಯಲಿ.

Published by
ನಾ.ಕಾರಂತ ಪೆರಾಜೆ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

13 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

19 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

20 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago