Advertisement
ಯಕ್ಷಗಾನ : ಮಾತು-ಮಸೆತ

‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ…..

Share

ಪಾರಂಪರಿಕವಾಗಿ ತಲೆಮಾರಿಂದ ತಲೆಮಾರಿಗೆ ಹರಿದು ಬಂದ ಯಕ್ಷಗಾನದ ಅರ್ಥಗಾರಿಕೆಯು ಕನ್ನಡ ಸಾಹಿತ್ಯಕ್ಕೆ ದೊಡ್ಡ ಅಲಿಖಿತ ಕೊಡುಗೆ ನೀಡಿದೆ. ಡಾ.ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ್ ಮಲ್ಪೆ ಶಂಕರನಾರಾಯಣ ಸಾಮಗ, ಹರಿದಾಸ್ ಮಲ್ಪೆ ರಾಮದಾಸ ಸಾಮಗರು, ಕವಿಭೂಷಣ ವೆಂಕಪ್ಪ ಶೆಟ್ಟರು, ವಿದ್ವಾನ್ ಕಾಂತ ರೈ… ಅಲ್ಲದೆ ಇವರಿಂದಲೂ ಹಿಂದಿನ ಅನೇಕ ಉದ್ಧಾಮರು ಅರ್ಥಗಾರಿಕೆಗೆ ಹೊಸ ಹೊಳಹನ್ನು ನೀಡಿದ್ದಾರೆ. ಆ ಕಾಲಘಟ್ಟದಲ್ಲಿ ಅವರ ಅರ್ಥಗಾರಿಕೆಯನ್ನು ದಾಖಲಿಸುವ ತಂತ್ರಜ್ಞಾನಗಳು ವಿರಳ. ಸಾಮಾನ್ಯವಾಗಿ 2000ರ ಈಚೆಗೆ ಧ್ವನಿಮುದ್ರಿಕೆ, ವೀಡಿಯೋ ತಂತ್ರಜ್ಞಾನಗಳು ಅಭಿವೃದ್ಧಿಯಾದುವು. ಹಾಗಾಗಿ ಹಿರಿಯ ಅರ್ಥದಾರಿಗಳ ಅರ್ಥಗಾರಿಕೆಯ ಸೊಗಸು, ಸೊಬಗು ಮಾತಿಗೆ ಮಾತ್ರ ವಸ್ತುವಾಗಿದೆಯಷ್ಟೇ. ಈ ಹಿನ್ನೆಲೆಯಲ್ಲಿ ಹಿರಿಯರ ಅರ್ಥಗಾರಿಕೆಯ ‘ಝಲಕ್’ ನಿಮಗಾಗಿ ಇಂದಿನಿಂದ…..

 

ಶೇಣಿ ಗೋಪಾಲಕೃಷ್ಣ ಭಟ್ಟರ ‘ದೂರ್ವಾಸ’ ಮುನಿ.
(ಪ್ರಸಂಗ : ದೂರ್ವಾಸಾತಿಥ್ಯ)

ಸಂದರ್ಭ : ಮುನಿಯು ಕೌರವನ ಅಸ್ಥಾನಕ್ಕೆ ಬಂದಾಗ…..

“..ಮೃಷ್ಟಾನ್ನ ಭೋಜನದಿಂದ ನನ್ನನ್ನು, ನನ್ನ ಪರಿವಾರದವರನ್ನು ತಣಿಸು. ಇನ್ನೂ ಒಂದು ತಾತ್ವಿಕ ಹಿನ್ನೆಲೆಯಿದೆ. ನನ್ನಂತಹವರಿಗೆ ಮೂಡುವ ಹಸಿವೆ ಅಪರೂಪದ್ದು. ಹೇಳಿಕೇಳಿ ರುದ್ರಾಂಶ ಸಂಭೂತ ನಾನು. ಪ್ರತ್ಯಕ್ಷವಾಗಿ ಶಿವನಂತೆ ನಿನ್ನ ಮುಂದೆ ಗುರುಭೂತವಾಗಿ ಬಂದಿರುವಾಗ, ನನ್ನ ಹೊಟ್ಟೆಯ ಹಸಿವು ತಣಿಸಲ್ಪಟ್ಟರೆ, ಬಹುಶಃ ಎಲ್ಲಾ ಭೂತಗಳ ಪ್ರಾತಿನಿಧ್ಯವನ್ನು ವಹಿಸಿದ ಮಾತ್ರವಲ್ಲ, ಸರ್ವಸ್ವದಲ್ಲೂ ಅಖಂಡ ನಾನು ಅಂತ ತಿಳಿದ ನನ್ನ ಚಿತ್ತವೃತ್ತಿಗೆ, ನನ್ನ ಮನೋವೃತ್ತಿಗೆ ಸಂದಾಗ ಅದು ಬಹುಶಃ ಎಲ್ಲರಿಗೂ ಮುಟ್ಟುತ್ತದೆ…
ಈ ಪ್ರಪಂಚದಲ್ಲಿ ಯಾವ ಜೀವಿಯ ಮನಸ್ಸನ್ನು ತುಂಬ ತೃಪ್ತಿಪಡಿಸಲಿಕ್ಕಾಗುವುದಿಲ್ಲ. ಮನಸ್ಸು ‘ಬೇಕು’ ಅಂತ ಹೇಳುತ್ತದೆ. ‘ಬೇಕು’ ಅಂತ ಬಯಸಿದ್ದು ಸಿಕ್ಕಿದರೆ ಮತ್ತಷ್ಟು ಬೇಕು ಅಂತ ಅನ್ನಿಸುತ್ತದೆ. ಈ ಬೇಕುಗಳ ಸರಮಾಲೆಯಿಂದ ಜೀವರನ್ನು ಹೊರಕ್ಕೆ ಎಳೆದು ತಂದು ಅವರ ಪ್ರಾಣಕ್ಕೆ ತುಂಬಿ ತುಂಬಾ ಅನ್ನವನ್ನಿಟ್ಟೆವು ಅಂತಾದರೆ, ಆಗ ವಿರೋಧಿಯಾದರೂ, ‘ಸಾಕು ಸಾಕು’ ಅಂತ ಹೇಳುತ್ತಾನೆ. ಏನು ಕೊಟ್ಟರೂ ಮನುಷ್ಯನ ಬಾಯಿಂದ ‘ಸಾಕು’ ಅಂತ ಹೇಳಿಸುವುದು ಕಷ್ಟ. ಊಟ ಇಕ್ಕಿ ನೋಡು, ‘ಸಾಕು ಸಾಕು’ ಅಂತ ಹೇಳದೆ ಒಬ್ಬನೂ ಇರುವುದಿಲ್ಲ. ಆದರೆ ದುರಾತ್ಮರು ‘ಸಾಕು ಸಾಕು’ ಅನ್ನಿಸುವುದಕ್ಕೆ ದಂಡನೀತಿಯನ್ನೇ ಉಪಯೋಗಿಸುತ್ತಾರೆ. ಅಂತಹ ದಂಡನೀತಿ ಸ್ಥಾಯಿಯಾಗಿ, ಶಾಶ್ವತವಾಗಿ ಯಾರಿಗೂ ಸುಖವನ್ನು ಕೊಡುವುದಿಲ್ಲ. ಉಂಡವನು ಹರಸಬೇಕಾಗಿಲ್ಲ. ಉಂಡವನು ತೇಗಿದರೆ ಅದುವೇ ಆಶೀರ್ವಾದ..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

View Comments

  • ಉತ್ತಮ ಕೃಕರ್ಯ.ಈ ಕಾರ್ಯ ಇನ್ನಷ್ಟು ಮುಂದುವರಿಯಲಿ.

Published by
ನಾ.ಕಾರಂತ ಪೆರಾಜೆ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

7 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

16 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

22 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

22 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

22 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

22 hours ago