Advertisement
ಅನುಕ್ರಮ

ಬೇಕು ಮನಸಿಗೊಂದು ಬದಲಾವಣೆ

Share
ಮನಸಿನ ಭಾವನೆಗಳನ್ನು ಹಂಚಿಕೊಳ್ಳುವುದು ಅಗತ್ಯ. ಒಳ್ಳೆಯ ಗೆಳೆಯರಿದ್ದಾಗ ಅವರೊಂದಿಗೆ ಮಾತನಾಡುತ್ತಾ ರಿಲ್ಯಾಕ್ಸ್ ಆಗಿಬಿಡುತ್ತೇವೆ. ಎಲ್ಲರಿಗೆ ಈ ಭಾಗ್ಯವಿರುವುದಿಲ್ಲ. ಮನಸಿನ ಮಾತು ಹಂಚಿಕೊಳ್ಳುವಂತಹ ಮಿತ್ರರು ಸಿಗುವುದೇ ಅದೃಷ್ಟ. ಕರೆದಾಗಲೆಲ್ಲಾ ಮಾತನಾಡಲು ಗೆಳೆಯರು  ಸಿಗುವಂತಿದ್ದರೆ ! ಬಿಡಿ ಇದಂತು ಅಪರೂಪವೇ !. ಅಂತಹ  ಕ್ಷಣಗಳಲ್ಲಿ ಕೈ ಹಿಡಿಯುವುದು ಬರಹಗಳು.
ಬರಹಗಳು‌ ಮನಸಿನ ಕನ್ನಡಿಯಂತೆ. ಹಲವಾರು ವಿಷಯಗಳು ಮನಸಿಗೆ ಬಂದು ಹೋಗುತ್ತವೆ. ಅವುಗಳೆಲ್ಲಾ ನೆನಪಿನಲ್ಲಿ ಇರುವುದಿಲ್ಲ. ಅದರಲ್ಲೂ ಕೆಲವಂತೂ ಕಾಡೀ ಕಾಡೀ ಕೊನೆಗೆ ಬೇಕೆಂದಾಗ ಬರೆಯ ಹೊರಟರೆ ನೆನಪಿಗೇ ಬಾರದು. ಮಹಿಳೆಯರ ಮನಸಿನಲ್ಲಿ  ಹೀಗೆ  ಎಷ್ಟೋ  ಕಥೆಗಳು ಹುಟ್ಟಿ ಹುಟ್ಟಿ ಸಾಯುತ್ತವೆ ಎಂದು ಖ್ಯಾತ ಲೇಖಕಿ ವೈದೇಹಿಯವರು ತಮ್ಮ ಬರಹವೊಂದರಲ್ಲಿ ಹಂಚಿ ಕೊಂಡಿದ್ದಾರೆ.
ಮಾತಿನಲ್ಲಿ ಹೇಳಲಾಗದಂತಹುದು ಬರಹಗಳಾಗಿ ಹೊರ ಹೊಮ್ಮುತ್ತವೆ.   ಅಲ್ಲಿ ಕನಸುಗಳಿರುತ್ತವೆ, ಮನಸಿನ ಒತ್ತಡಗಳಿರುತ್ತವೆ, ನೋವು ಬೇಸರಿಕೆಗಳಿವೆ,‌ ಸಂತಸದ ಕ್ಷಣಗಳಿರುತ್ತವೆ, ಒಟ್ಟಾರೆ ಮನಸಿನ ಮಾತು ಅಕ್ಷರಗಳ ರೂಪ‌ ಪಡೆದು ಪ್ರಕಟ ಗೊಳ್ಳುತ್ತವೆ.  ಬರಹಗಳಿಂದ ಒತ್ತಡ ಕಡಿಮೆಯಾಗಿ ಮನಸು ನಿರಾಳವಾಗುತ್ತದೆ. ಕಥೆ ಕವನಗಳು ಯಾವಾಗ ಹುಟ್ಟುತ್ತವೆ ಎಂದು ಗೊತ್ತೇ ಆಗುವುದಿಲ್ಲ. ಪೆನ್ನು, ಪುಸ್ತಕ ಕೈಯಲ್ಲಿ ಹಿಡಿದು ಬರೆಯ ಬೇಕೆಂದು ಹೊರಟರೆ ಒಂದೇ ಒಂದು ಅಕ್ಷರಗಳು ಹೊಳೆಯದು. ಕಾಯಿ ಹೆರೆಯುತ್ತಿರುವಾಗ, ಹಾಲು ಕರೆಯುವಾಗ, ಹಿಟ್ಟು ಬೀಸುವಾಗ,  ಬಾಳೆಕಾಯಿ ,ಹಲಸಿನಕಾಯಿ ಕೊರೆ ಯುವಾಗ  ಇನ್ನೇನು ನಿದ್ದೆ ಬಂದೇ ಬಿಟ್ಟಿತು ಅನ್ನುವಾಗ, ತಟ್ಟನೆ ಒಳ್ಳೊಳ್ಳೆಯ ವಾಕ್ಯಗಳು ಹುಟ್ಟಿ ಬಿಡುತ್ತವೆ. ಬರೆದಿಡಲಾಗದ ಪರಿಸ್ಥಿತಿ. ಹತ್ತತ್ತು  ಬಾರಿ  ರಿಹರ್ಸಲ್ ಮಾಡಿದರೂ ಬರೆಯ ಹೊರಟಾಗ  ನೆನಪಿಗೆ ಬಾರದೆ ಸತಾಯಿಸಿ ಮತ್ತೇನೋ ಬರೆದು ಸಮಾಧಾನ ಮಾಡಿಕೊಳ್ಳ ಬೇಕಾಗುತ್ತದೆ. ಹೀಗೆ ಎಷ್ಟೋ ಹುಟ್ಟಿ ಹುಟ್ಟಿ ಸಾಯುವ ಕಥೆಗಳಿಗೆ ಲೆಕ್ಕವಿಲ್ಲ.
ಎಂದೋ ಆದ ಘಟನೆಗಳು ನಮ್ಮನ್ನು ಕೊರೆಯುತ್ತಿರುತ್ತದೆ. ಆ ಸಂದರ್ಭದಲ್ಲಿ ಏನೂ ಪ್ರತಿಕ್ರಿಯಿಸ ಲಾಗಿರುವುದಿಲ್ಲ. ಆದರೆ  ಒಳಗೇ ಕೆಂಡದಂತೆ ಸುಡುತ್ತಿರುತ್ತದೆ. ಯಾವುದೋ ಒಂದು ರೂಪದಲ್ಲಿ ಹೊರಹಾಕಲು ಕಾಯುತ್ತಿರುತ್ತೇವೆ. ಅದಕ್ಕೆ ಬರಹದ ರೂಪ ಕೊಟ್ಟಾಗ ಮನಸು ನಿರಾಳ. ಕಥೆ, ಕವನ, ಸಾಂದರ್ಭಿಕ ಲೇಖನಗಳು ಹೀಗೆ ಅದು ಯಾವ ರೂಪವಾದರೂ ಸರಿ ಪ್ರಕಟಗೊಳ್ಳುವುದು  ಮುಖ್ಯ. ಅಲ್ಲಿ ಕಲ್ಪನೆಯೂ ಸೇರಿ ಒಂದು ಒಳ್ಳೆಯ ಬರಹ ರೂಪುಗೊಳ್ಳುತ್ತದೆ. ಅದು ನಮ್ಮ ಮನಸಿಗೆ ಇಷ್ಟವಾದರೆ ಉಳಿದವರೂ ಮೆಚ್ಚಿ ಒಂದೆರಡು ಮಾತು ಹೇಳಿದರೆ ಸ್ವರ್ಗಕ್ಕೆ ಕಿಚ್ಚು ಹಚ್ಚುವುದೊಂದೇ ಬಾಕಿ.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

12 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

12 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

12 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

12 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago