Advertisement
ಸುದ್ದಿಗಳು

ಬೇಡಿಕೆ ಈಡೇರದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟನೆ- ಟೈಲರ್ಸ್ ಎಸೋಸಿಯೇಶನ್

Share

ಸುಳ್ಯ: ಕಳೆದ 20 ವರ್ಷಗಳಿಂದ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದೆವು. ಅದರಲ್ಲಿ ಮುಖ್ಯವಾದ ಕೆಲವು ಬೇಡಿಕೆಗಳನ್ನು ಕರ್ನಾಟಕದ ಎಲ್ಲಾ ಶಾಸಕರಿಗೆ ಪ್ರತ್ಯೇಕವಾಗಿ ಮತ್ತೆ ಮನವಿ ಮೂಲಕ ಸಲ್ಲಿಸಲಾಗಿದೆ. ಮುಂದಿನ ಬಜೆಟ್‍ನಲ್ಲಿ ಟೈಲರ್ಸ್ ವೃತ್ತಿ ಬಾಂಧವರ ಈ ಬೇಡಿಕೆಗಳು ಈಡೇರದೇ ಇದ್ದರೆ ಎಸೋಸಿಯೇಶನ್ ವತಿಯಿಂದ ರಾಜ್ಯದಾದ್ಯಂತ ಎಲ್ಲಾ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ಇದೆ. ಮುಖ್ಯವಾಗಿ ಐದು ಬೇಡಿಕೆಗಳನ್ನು ಮುಂದಿರಿಸಲಾಗಿದ್ದು ಇದು ಈಡೇರದಿದ್ದರೆ ರಾಜ್ಯ ಸಮಿತಿಯ ಕರೆಯಂತೆ ಸುಳ್ಯದಲ್ಲಿಯೂ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದರು. ಹೊಲಿಗೆ ಕೆಲಸಗಾರರಿಗೆ ಭವಿಷ್ಯ ನಿಧಿ ಯೋಜನೆ ಜಾರಿಯಾಗಿದ್ದು ಕೂಡಲೇ ಅನುಷ್ಠಾನ ಮಾಡಬೇಕು, ಪ್ರಧಾನಮಂತ್ರಿ ಶ್ರಮಿಕ್ ಮಾನ್ದನ್ ಯೋಜನೆಗೆ 18ರಿಂದ 40 ವರ್ಷದವರೆಗೆ ಪ್ರಾಯದವರಿಗೆ ಮಾತ್ರ ಅವಕಾಶವಿದ್ದು ಅದನ್ನು 55 ವರ್ಷದವರೆಗೆ ವಿಸ್ತರಿಸಬೇಕು, ಪ್ರಧಾನಮಮತ್ರಿ ಜೀವನ್ ಜ್ಯೋತಿ ಭೀಮಾ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತಿನ ಶೆ.50ನ್ನು ರಾಜ್ಯ ಸರಕಾರ ಭರಿಸಬೇಕು, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತನ್ನು ರಾಜ್ಯ ಸರಕಾರ ಭರಿಸಬೇಕು. ಹೊಲಿಗೆ ಕೆಲಸಗಾರರ ಹೆಣ್ಣುಮಕ್ಕಳಿಗೆ ಹಾಗು ಹೊಲಿಗೆ ಕೆಲಸ ನಿರ್ವಹಿಸುವ ಹೆಣ್ಣು ಮಕ್ಕಳಿಗೆ 50,000 ವಿವಾಹಧನ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ದಿವಾಕರ.ಡಿ.ಟಿ, ಪ್ರಧಾನ ಕಾರ್ಯದರ್ಶಿ ಶರ್ಮಿಳಾ ವಿ.ರೈ, ಮಾಜಿ ಅಧ್ಯಕ್ಷರಾದ ಕುಸುಮಾಧರ ಬೂಡು, ವಿಜಯಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

"ಉಳಿದ ಇಡ್ಲಿಯಿಂದ ಏನು ಮಾಡೋದು?” ಇಲ್ಲಿದೆ ನೋಡಿ ರೆಸಿಪಿ..

54 minutes ago

ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ | ಸ್ವಾವಲಂಬನೆಯ ಸಂಕಲ್ಪದಿಂದ ಜಾಗತಿಕ ಮಾರುಕಟ್ಟೆಯವರೆಗೆ

ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…

1 hour ago

ನಕಲಿ ಬೀಜಗಳ ಮಾರಾಟ ತಡೆಗೆ ಕ್ರಮ – ಬಜೆಟ್ ಅಧಿವೇಶನದಲ್ಲಿ ಬೀಜ ಕಾಯ್ದೆ–2026 ಮಂಡನೆ

ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…

2 hours ago

ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬ | ಮಕ್ಕಳಿಗೆ ಹಾರ್ನ್ಬಿಲ್ ಜೀವನ ಕ್ರಮ ಕುರಿತು ಜಾಗೃತಿ

ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…

2 hours ago

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾದರೆ ಕ್ರಮ ಅನಿವಾರ್ಯ | ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…

2 hours ago

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ – ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…

2 hours ago