Advertisement
ಸುದ್ದಿಗಳು

ಬೇಡಿಕೆ ಈಡೇರದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟನೆ- ಟೈಲರ್ಸ್ ಎಸೋಸಿಯೇಶನ್

Share

ಸುಳ್ಯ: ಕಳೆದ 20 ವರ್ಷಗಳಿಂದ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದೆವು. ಅದರಲ್ಲಿ ಮುಖ್ಯವಾದ ಕೆಲವು ಬೇಡಿಕೆಗಳನ್ನು ಕರ್ನಾಟಕದ ಎಲ್ಲಾ ಶಾಸಕರಿಗೆ ಪ್ರತ್ಯೇಕವಾಗಿ ಮತ್ತೆ ಮನವಿ ಮೂಲಕ ಸಲ್ಲಿಸಲಾಗಿದೆ. ಮುಂದಿನ ಬಜೆಟ್‍ನಲ್ಲಿ ಟೈಲರ್ಸ್ ವೃತ್ತಿ ಬಾಂಧವರ ಈ ಬೇಡಿಕೆಗಳು ಈಡೇರದೇ ಇದ್ದರೆ ಎಸೋಸಿಯೇಶನ್ ವತಿಯಿಂದ ರಾಜ್ಯದಾದ್ಯಂತ ಎಲ್ಲಾ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಹೇಳಿದ್ದಾರೆ.

Advertisement
Advertisement
Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ಇದೆ. ಮುಖ್ಯವಾಗಿ ಐದು ಬೇಡಿಕೆಗಳನ್ನು ಮುಂದಿರಿಸಲಾಗಿದ್ದು ಇದು ಈಡೇರದಿದ್ದರೆ ರಾಜ್ಯ ಸಮಿತಿಯ ಕರೆಯಂತೆ ಸುಳ್ಯದಲ್ಲಿಯೂ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದರು. ಹೊಲಿಗೆ ಕೆಲಸಗಾರರಿಗೆ ಭವಿಷ್ಯ ನಿಧಿ ಯೋಜನೆ ಜಾರಿಯಾಗಿದ್ದು ಕೂಡಲೇ ಅನುಷ್ಠಾನ ಮಾಡಬೇಕು, ಪ್ರಧಾನಮಂತ್ರಿ ಶ್ರಮಿಕ್ ಮಾನ್ದನ್ ಯೋಜನೆಗೆ 18ರಿಂದ 40 ವರ್ಷದವರೆಗೆ ಪ್ರಾಯದವರಿಗೆ ಮಾತ್ರ ಅವಕಾಶವಿದ್ದು ಅದನ್ನು 55 ವರ್ಷದವರೆಗೆ ವಿಸ್ತರಿಸಬೇಕು, ಪ್ರಧಾನಮಮತ್ರಿ ಜೀವನ್ ಜ್ಯೋತಿ ಭೀಮಾ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತಿನ ಶೆ.50ನ್ನು ರಾಜ್ಯ ಸರಕಾರ ಭರಿಸಬೇಕು, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತನ್ನು ರಾಜ್ಯ ಸರಕಾರ ಭರಿಸಬೇಕು. ಹೊಲಿಗೆ ಕೆಲಸಗಾರರ ಹೆಣ್ಣುಮಕ್ಕಳಿಗೆ ಹಾಗು ಹೊಲಿಗೆ ಕೆಲಸ ನಿರ್ವಹಿಸುವ ಹೆಣ್ಣು ಮಕ್ಕಳಿಗೆ 50,000 ವಿವಾಹಧನ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಲಾಗಿದೆ ಎಂದು ಅವರು ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ದಿವಾಕರ.ಡಿ.ಟಿ, ಪ್ರಧಾನ ಕಾರ್ಯದರ್ಶಿ ಶರ್ಮಿಳಾ ವಿ.ರೈ, ಮಾಜಿ ಅಧ್ಯಕ್ಷರಾದ ಕುಸುಮಾಧರ ಬೂಡು, ವಿಜಯಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

3 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

3 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

3 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

11 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

12 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

13 hours ago