Advertisement
ಸುದ್ದಿಗಳು

ಬೇಡಿಕೆ ಈಡೇರದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟನೆ- ಟೈಲರ್ಸ್ ಎಸೋಸಿಯೇಶನ್

Share

ಸುಳ್ಯ: ಕಳೆದ 20 ವರ್ಷಗಳಿಂದ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದೆವು. ಅದರಲ್ಲಿ ಮುಖ್ಯವಾದ ಕೆಲವು ಬೇಡಿಕೆಗಳನ್ನು ಕರ್ನಾಟಕದ ಎಲ್ಲಾ ಶಾಸಕರಿಗೆ ಪ್ರತ್ಯೇಕವಾಗಿ ಮತ್ತೆ ಮನವಿ ಮೂಲಕ ಸಲ್ಲಿಸಲಾಗಿದೆ. ಮುಂದಿನ ಬಜೆಟ್‍ನಲ್ಲಿ ಟೈಲರ್ಸ್ ವೃತ್ತಿ ಬಾಂಧವರ ಈ ಬೇಡಿಕೆಗಳು ಈಡೇರದೇ ಇದ್ದರೆ ಎಸೋಸಿಯೇಶನ್ ವತಿಯಿಂದ ರಾಜ್ಯದಾದ್ಯಂತ ಎಲ್ಲಾ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ಇದೆ. ಮುಖ್ಯವಾಗಿ ಐದು ಬೇಡಿಕೆಗಳನ್ನು ಮುಂದಿರಿಸಲಾಗಿದ್ದು ಇದು ಈಡೇರದಿದ್ದರೆ ರಾಜ್ಯ ಸಮಿತಿಯ ಕರೆಯಂತೆ ಸುಳ್ಯದಲ್ಲಿಯೂ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದರು. ಹೊಲಿಗೆ ಕೆಲಸಗಾರರಿಗೆ ಭವಿಷ್ಯ ನಿಧಿ ಯೋಜನೆ ಜಾರಿಯಾಗಿದ್ದು ಕೂಡಲೇ ಅನುಷ್ಠಾನ ಮಾಡಬೇಕು, ಪ್ರಧಾನಮಂತ್ರಿ ಶ್ರಮಿಕ್ ಮಾನ್ದನ್ ಯೋಜನೆಗೆ 18ರಿಂದ 40 ವರ್ಷದವರೆಗೆ ಪ್ರಾಯದವರಿಗೆ ಮಾತ್ರ ಅವಕಾಶವಿದ್ದು ಅದನ್ನು 55 ವರ್ಷದವರೆಗೆ ವಿಸ್ತರಿಸಬೇಕು, ಪ್ರಧಾನಮಮತ್ರಿ ಜೀವನ್ ಜ್ಯೋತಿ ಭೀಮಾ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತಿನ ಶೆ.50ನ್ನು ರಾಜ್ಯ ಸರಕಾರ ಭರಿಸಬೇಕು, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತನ್ನು ರಾಜ್ಯ ಸರಕಾರ ಭರಿಸಬೇಕು. ಹೊಲಿಗೆ ಕೆಲಸಗಾರರ ಹೆಣ್ಣುಮಕ್ಕಳಿಗೆ ಹಾಗು ಹೊಲಿಗೆ ಕೆಲಸ ನಿರ್ವಹಿಸುವ ಹೆಣ್ಣು ಮಕ್ಕಳಿಗೆ 50,000 ವಿವಾಹಧನ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ದಿವಾಕರ.ಡಿ.ಟಿ, ಪ್ರಧಾನ ಕಾರ್ಯದರ್ಶಿ ಶರ್ಮಿಳಾ ವಿ.ರೈ, ಮಾಜಿ ಅಧ್ಯಕ್ಷರಾದ ಕುಸುಮಾಧರ ಬೂಡು, ವಿಜಯಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

24 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago