Advertisement
ನಮ್ಮೂರ ಸುದ್ದಿ

ಬೇಸಗೆಯಲ್ಲೂ ಚಾಲೂ ಆಗಲಿಲ್ಲ ಕುಡಿಯುವ ನೀರಿನ ಘಟಕ…..!!

Share
ಜಾಲ್ಸೂರು : ಜಾಲ್ಸೂರಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕಕ್ಕೆ ನೀರಿನ ದಾಹವಿರುವ ಬೇಸಗೆ ಹೊತ್ತಿನಲ್ಲೂ ಉಪಯೋಗಕ್ಕೆ ಇಲ್ಲವಾಗಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿರುವ ಈ ಘಟಕ ಕಾರ್ಯಾರಂಭಕ್ಕೆ ಮೀನ ಮೇಷ ಎಣಿಸುತ್ತಿದೆ. ಸ್ಥಳೀಯ ಪರಿಸರದ ಹಾಗೂ ಪ್ರಯಾಣಿಕರ ನೀರಿನ ದಾಹ ನೀಗಿಸಲು ಒಂದಷ್ಟು ನೆರವಾಗಬಹುದಿತ್ತು. ಅದಾಗ್ಯೂ ಘಟಕ ಕಾರ್ಯನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ.
ಜಾಲ್ಸೂರು ಗ್ರಾ.ಪಂ.ವ್ಯಾಪ್ತಿಗೆ ಒಳಪಟ್ಟಿರುವ ಪ್ರದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇತೃತ್ವದಲ್ಲಿ ಘಟಕ ನಿರ್ಮಿಸಲಾಗಿದೆ. ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪನೆಗೊಂಡಿರುವ ಈ ಘಟಕ ನೀರು ಒದಗಿಸಲು ಇನ್ನೂ ಶಕ್ತವಾಗಿಲ್ಲ. ಜಾಲ್ಸೂರು ಮತ್ತು ಕನಕಮಜಲು ಎರಡೂ ಗ್ರಾ.ಪಂ.ಗಳ ವ್ಯಾಪ್ತಿ ಪ್ರದೇಶದ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನೀರು ಪಡೆದುಕೊಳ್ಳಲು ಅನುಕೂಲ. ಉಭಯ ಗ್ರಾ.ಪಂ. ವ್ಯಾಪ್ತಿಯ ಕೆಲ ವಾರ್ಡ್‌ಗಳಲ್ಲಿ ನೀರಿನ ಕೊರತೆ ಕಂಡಿದ್ದು, ಇಂತಹ ಸಂದರ್ಭದಲ್ಲಿ ಘಟಕ ಸಹಕಾರಿ ಆಗುತಿತ್ತು. ಆದರೆ ದುರಸ್ತಿ ಬಗ್ಗೆ ಸ್ಥಳೀಯಾಡಳಿತವು ಮನಸ್ಸು ಮಾಡಿಲ್ಲ ಎನ್ನುವುದು ಸಾರ್ವಜನಿಕರ ದೂರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 2015-16ನೇ ಸಾಲಿನಲ್ಲಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಲ್ಲಿ ದಿನದ 24 ತಾಸು ನೀರೊದಗಿಸಲು ಜನಸಂದಣಿ ಸ್ಥಳಗಳಲ್ಲಿ ಘಟಕ ಸ್ಥಾಪಿಸಲು ಉದ್ದೇಶಿಸಿತ್ತು. ಗ್ರಾ.ಪಂ. ಸಹಭಾಗಿತ್ವದಲ್ಲಿ ಸ್ಥಳ ನಿಗದಿಪಡಿಸಿ ಘಟಕ ಸ್ಥಾಪಿಸಬೇಕಿತ್ತು. ಈ ಯಂತ್ರಕ್ಕೆ 1 ರೂ. ನಾಣ್ಯ ಹಾಕಿದರೆ, ಆರರಿಂದ ಎಂಟು ಲೀಟರ್‌ ತನಕ ಶುದ್ಧ ನೀರು ಒದಗಿಸುವ ಯೋಜನೆ ಇದಾಗಿತ್ತು. ದ.ಕ. ಜಿಲ್ಲೆಯಲ್ಲಿ ಈ ಯೋಜನೆ ಕಾರ್ಯಸಾಧುವಲ್ಲ ಎಂಬ ಅಭಿಪ್ರಾಯ ಆರಂಭದಲ್ಲೇ ವ್ಯಕ್ತವಾಗಿದ್ದರೂ ಕಾಮಗಾರಿ ಅನುಷ್ಠಾನಗೊಂಡಿತ್ತು. ಅದು ಸಮರ್ಪಕ ರೀತಿಯಲ್ಲಿ ಸಾಗದ ಕಾರಣ ಗುತ್ತಿಗೆ ಸಂಸ್ಥೆಗೆ ನೀಡಿದ ಟೆಂಡರ್‌ ಅನ್ನು ಸರಕಾರ ರದ್ದುಗೊಳಿಸಿತ್ತು. ದ.ಕ.ಜಿ.ಪಂ.ನಲ್ಲಿ ಸದನ ಸಮಿತಿ ರಚಿಸಿ ಪರಿಶೀಲನೆ ಕ್ರಮ ಕೈಗೊಳ್ಳಲಾಗಿತ್ತು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

8 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

10 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

11 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

24 hours ago