Advertisement
ನಮ್ಮೂರ ಸುದ್ದಿ

ಬೇಸಗೆಯಲ್ಲೂ ಚಾಲೂ ಆಗಲಿಲ್ಲ ಕುಡಿಯುವ ನೀರಿನ ಘಟಕ…..!!

Share
ಜಾಲ್ಸೂರು : ಜಾಲ್ಸೂರಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕಕ್ಕೆ ನೀರಿನ ದಾಹವಿರುವ ಬೇಸಗೆ ಹೊತ್ತಿನಲ್ಲೂ ಉಪಯೋಗಕ್ಕೆ ಇಲ್ಲವಾಗಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿರುವ ಈ ಘಟಕ ಕಾರ್ಯಾರಂಭಕ್ಕೆ ಮೀನ ಮೇಷ ಎಣಿಸುತ್ತಿದೆ. ಸ್ಥಳೀಯ ಪರಿಸರದ ಹಾಗೂ ಪ್ರಯಾಣಿಕರ ನೀರಿನ ದಾಹ ನೀಗಿಸಲು ಒಂದಷ್ಟು ನೆರವಾಗಬಹುದಿತ್ತು. ಅದಾಗ್ಯೂ ಘಟಕ ಕಾರ್ಯನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ.
ಜಾಲ್ಸೂರು ಗ್ರಾ.ಪಂ.ವ್ಯಾಪ್ತಿಗೆ ಒಳಪಟ್ಟಿರುವ ಪ್ರದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇತೃತ್ವದಲ್ಲಿ ಘಟಕ ನಿರ್ಮಿಸಲಾಗಿದೆ. ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪನೆಗೊಂಡಿರುವ ಈ ಘಟಕ ನೀರು ಒದಗಿಸಲು ಇನ್ನೂ ಶಕ್ತವಾಗಿಲ್ಲ. ಜಾಲ್ಸೂರು ಮತ್ತು ಕನಕಮಜಲು ಎರಡೂ ಗ್ರಾ.ಪಂ.ಗಳ ವ್ಯಾಪ್ತಿ ಪ್ರದೇಶದ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನೀರು ಪಡೆದುಕೊಳ್ಳಲು ಅನುಕೂಲ. ಉಭಯ ಗ್ರಾ.ಪಂ. ವ್ಯಾಪ್ತಿಯ ಕೆಲ ವಾರ್ಡ್‌ಗಳಲ್ಲಿ ನೀರಿನ ಕೊರತೆ ಕಂಡಿದ್ದು, ಇಂತಹ ಸಂದರ್ಭದಲ್ಲಿ ಘಟಕ ಸಹಕಾರಿ ಆಗುತಿತ್ತು. ಆದರೆ ದುರಸ್ತಿ ಬಗ್ಗೆ ಸ್ಥಳೀಯಾಡಳಿತವು ಮನಸ್ಸು ಮಾಡಿಲ್ಲ ಎನ್ನುವುದು ಸಾರ್ವಜನಿಕರ ದೂರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 2015-16ನೇ ಸಾಲಿನಲ್ಲಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಲ್ಲಿ ದಿನದ 24 ತಾಸು ನೀರೊದಗಿಸಲು ಜನಸಂದಣಿ ಸ್ಥಳಗಳಲ್ಲಿ ಘಟಕ ಸ್ಥಾಪಿಸಲು ಉದ್ದೇಶಿಸಿತ್ತು. ಗ್ರಾ.ಪಂ. ಸಹಭಾಗಿತ್ವದಲ್ಲಿ ಸ್ಥಳ ನಿಗದಿಪಡಿಸಿ ಘಟಕ ಸ್ಥಾಪಿಸಬೇಕಿತ್ತು. ಈ ಯಂತ್ರಕ್ಕೆ 1 ರೂ. ನಾಣ್ಯ ಹಾಕಿದರೆ, ಆರರಿಂದ ಎಂಟು ಲೀಟರ್‌ ತನಕ ಶುದ್ಧ ನೀರು ಒದಗಿಸುವ ಯೋಜನೆ ಇದಾಗಿತ್ತು. ದ.ಕ. ಜಿಲ್ಲೆಯಲ್ಲಿ ಈ ಯೋಜನೆ ಕಾರ್ಯಸಾಧುವಲ್ಲ ಎಂಬ ಅಭಿಪ್ರಾಯ ಆರಂಭದಲ್ಲೇ ವ್ಯಕ್ತವಾಗಿದ್ದರೂ ಕಾಮಗಾರಿ ಅನುಷ್ಠಾನಗೊಂಡಿತ್ತು. ಅದು ಸಮರ್ಪಕ ರೀತಿಯಲ್ಲಿ ಸಾಗದ ಕಾರಣ ಗುತ್ತಿಗೆ ಸಂಸ್ಥೆಗೆ ನೀಡಿದ ಟೆಂಡರ್‌ ಅನ್ನು ಸರಕಾರ ರದ್ದುಗೊಳಿಸಿತ್ತು. ದ.ಕ.ಜಿ.ಪಂ.ನಲ್ಲಿ ಸದನ ಸಮಿತಿ ರಚಿಸಿ ಪರಿಶೀಲನೆ ಕ್ರಮ ಕೈಗೊಳ್ಳಲಾಗಿತ್ತು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

2 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

2 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

3 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

5 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

17 hours ago