ಅನುಕ್ರಮ

ಬೇಸಿಗೆ ರಜೆಯೂ ಅಜ್ಜನ ಮನೆಯೂ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇಸಿಗೆ ರಜೆಯೆಂದರೆ ನೆನಪಾಗುವುದು  ಅಜ್ಜಿ ಮನೆ.

Advertisement

ಎಲ್ಲರೂ ಅಜ್ಜಿ ಮನೆಗೆ ಪೇಟೆಯಿಂದ ಹಳ್ಳಿಗೆ ಬಂದರೆ ನಾವು ಹಳ್ಳಿಯಿಂದ ಪೇಟೆಗೆ ಹೋಗುತ್ತಿದ್ದೆವು.  ಮನೆ ಮುಂದೆಯೇ ಸಾಲಾಗಿ ಹೋಗುವ ಆಟೋ ರಿಕ್ಷಾ, ಕಾರು , ಬಸ್ ಗಳು,  ನಮೂನೆ , ನಮೂನೆ ಬೈಕ್, ಸ್ಕೂಟರ್ ಗಳು ನಮ್ಮನ್ನು  ಅಜ್ಜಿ ಮನೆ ಪಕ್ಕದ ಕಂಪೌಂಡ್    ಹತ್ತಿರ ನಮ್ಮ ಅಜ್ಜನೊಟ್ಟಿಗೆ ನಿಂತು ಕೊಂಡು ಲೆಕ್ಕ ಹಾಕುತ್ತಿದ್ದೆವು. ಆ ದಿನಗಳಲ್ಲಿ ಲೆಕ್ಕದ ಬೈಕುಗಳು, ಎರಡಂಕಿಯೊಳಗಿನ ನಾಲ್ಕು ಚಕ್ರದ ವಾಹನಗಳು ಮಾರ್ಗ ದಲ್ಲಿ ಓಡಾಡುತ್ತಿದ್ದವು.  ನಾನು , ನನ್ನ ತಂಗಿ ಹಾಗೂ  ‌‌ಮಾವನ ಎರಡರ ಹರೆಯದ  ಮಗ ಮೂವರು ಸೇರಿ ಲೆಕ್ಕ ಹಾಕುತ್ತಿದ್ದೆವು. ನಾವು ಮಾರ್ಗಕ್ಕೆ ಇಳಿಯದಂತೆ ಅಜ್ಜ ಜಾಗ್ರತೆ ವಹಿಸುತ್ತಿದ್ದರು.   ಸಂಜೆ ಮಾವಂದಿರು ಮನೆಗೆ ಬರುತ್ತಲೇ ನಮ್ಮ ಲೆಕ್ಕ ಒಪ್ಪಿಸುತ್ತಿದ್ದೆವು. ಸುಸ್ತಾಗಿ ಬಂದಿದ್ದರೂ ಸ್ವಲ್ಪವೂ  ಬೇಸರಿಸಿಕೊಳ್ಳದೇ  ಕೇಳಿಸಿಕೊಳ್ಳುತ್ತಿದ್ದರು.  ಮರುದಿನಕ್ಕೆ ನಮ್ಮ ಬೇಡಿಕೆಗಳ ಪಟ್ಟಿಗಳನ್ನು ತಾಳ್ಮೆಯಿಂದ ಕೇಳಿಕೊಳ್ಳುತ್ತಿದ್ದರು.  ಸಾದ್ಯ ವಾದಷ್ಟು  ಇಡೇರಿಸುತ್ತಿದ್ದರು. ಆವಾಗಿನ ಮಕ್ಕಳ ಬೇಡಿಕೆ ಗಳೂ  ಸಣ್ಣ ಮಟ್ಟಿನವು . ಮಣಿಸರ,     ಪ್ಲಾಸ್ಟಿಕ್ ಬಳೆಗಳುು, ಪುಟ್ಟ ಕೈ ಚೀಲ ,   ಉದ್ದ ನೇಯ ಗೌನ್ ,  ಬಿಸ್್ಕ್ಕತ್ತು , ಪೆಪ್ಪರ್  ಮೆೆಂಟ್,  ಬಾಲಮಂಗಳ, ಚಂದಮಮ ಇವುಗಳು ನಮ್ಮ ಪಟ್ಟಿಯಲ್ಲಿ ಸ್ಥಾನ  ಪಡೆದವುಗಳು. ಮಾವಂದಿರೂ ‌ ಬುದ್ಧಿವಂತಿಕೆ ತೋರಿಸುತ್ತಾ    ಇದ್ದರು, ದಿನಕ್ಕೆ   ಒಂದೇ ಎಂದು.

ಈ ಎಲ್ಲಾ ವುಗಳಿಗಿಂತ ನಮಗೆ ಆಕರ್ಷಣೆ ಇದ್ದುದು ಅಜ್ಜ ಹೇಳುತ್ತಿದ್ದ ಕಥೆಗಳಲ್ಲಿ. ಅಜ್ಜ ನ ಮನೆ ಕೊಡಗಿನ ವಿರಾಜಪೇಟೆ. ಅಲ್ಲಿ ನಮ್ಮ ಇಲ್ಲಿಗಿಂತ ಚಳಿ. ನಮ್ಮ ಬಾಲ್ಯದ ದಿನಗಳಲ್ಲಿ ಪೇಟೆಯಾದರೂ ಹಳ್ಳಿಯ ವಾತಾವರಣ ಅಲ್ಲಿ ಇತ್ತು.  ಪೇಟೆಯ ಹೊರವಲಯದಲ್ಲಿ ಇದ್ದ ಕಾರಣ ಮಾಲಿನ್ಯ ರಹಿತ ವಾತಾವರಣ. ಹಾಗಾಗಿ  ಅಜ್ಜನನ್ನು ಪೇಟೆಗೆ ಹೋಗಲೂ ಬಿಡದೆ ಕಥೆ ಹೇಳುವಂತೆ ಸತಾಯಿಸುತ್ತಿದ್ದೆವು. ಅವರು ಒಂದು ಹೊತ್ತಿಗೆ ೫ ಕಥೆಗಳನ್ನು ಹೇಳದೆ ಬಿಡುತ್ತಲೇ  ಇರಲಿಲ್ಲ.  ಅವರೂ ಅಷ್ಟೇ ಬಹಳ ಶ್ರದ್ಧೆಯಿಂದ ಯಾವುದೂ ಪುನರಾವರ್ತಿತ ವಾಗದಂತೆ ವಿಭಿನ್ನ ಶೈಲಿಯಲ್ಲಿ ಬೇರೆ ಬೇರೆ ಕಥೆಗಳನ್ನು ಹೇಳುತ್ತಿದ್ದರು.   ಅಲ್ಲಿ ರಾಮಾಯಣ , ಮಹಾಭಾರತ,  ಕಥೆಗಳಲ್ಲದೆ  ತೆನಾಲಿರಾಮ,  ಚಾಣಕ್ಯ, ವಿಕ್ರಮ ಬೇತಾಳದ ಪಾತ್ರಗಳೆಲ್ಲಾ ಬಂದು ಹೋಗುತ್ತಿದ್ದವು.  ಅಜ್ಜ ಎಷ್ಟು ಆಕರ್ಷಕ ವಾಗಿ ಕಥೆ ಹೇಳುತ್ತಿದ್ದರೆಂದರೆ ಅಜ್ಜಿ ತಂದಿಡುತ್ತಿದ್ದ ಕೋಡುಬಳೆ, ಕರ್ಜಿಕಾಯಿ, ತುಕ್ಕುಡಿ ಕಣ್ಣಿಗೆ ಕಾಣುತ್ತಿರಲಿಲ್ಲ.  ಕಥೆಯ ಪಾತ್ರಗಳೇ ಕಣ್ಣಮುಂದಿರುತ್ತಿದ್ದುವು.  ಅಜ್ಜಿ ಅಜ್ಜನಿಗೆ ಹೇಳುತ್ತಿದ್ದ ಕೆಲಸಗಳನ್ನೆಲ್ಲಾ ನಾವೇ ಮಾಡಿಮುಗಿಸುತ್ತಿದ್ದೆವು  ಕಥೆಯ ಸಮಯ ತಪ್ಪಬಾರದಲ್ಲಾ ಎಂಬ ಮುಂದಾಲೋಚನೆಯಲ್ಲಿ.   ಆಮೇಲೆ ದೂರದರ್ಶನ ಬಂದರೂ ಅಜ್ಜ ಹೇಳುತ್ತಿದ್ದ ಕಥೆಯ ಆಕರ್ಷಣೆ ಕಡಿಮೆಯಾಗಲಿಲ್ಲ. ನಮ್ಮ ಬಾಲ್ಯದಲ್ಲಿ  ಪ್ರಸಾರವಾಗುತ್ತಿದ್ದ  ರಾಮಾಯಣ ಮಹಾಭಾರತ ಗಳು ಈಗ ಮತ್ತೆ ಪ್ರಸಾರವಾಗುತ್ತಿವೆ. ಅಂದು ಒಂದು ಎಪಿಸೋಡ್ ನಿಂದ ಮುಂದಿನ ಎಪಿಸೋಡ್ ಗೆ ಒಂ  ದು ವಾರ ಕಾಯಬೇಕಾಗುತ್ತಿತ್ತು. ಆದರೆ ಈಗ ಒಂದೇ ದಿನ ಎರಡು ಬಾರಿ ಪ್ರಸಾರವಾಗುತ್ತಿದೆ. ಅದೂ ರಾಮಾಯಣ ಹಾಗೂ ಮಹಾಭಾರತ  .  ನಾವು ನೋಡಿದ ಅದೇ ಸಂಚಿಕೆಗಳು ನಮ್ಮ ಮಕ್ಕಳೂ‌ ಆಸಕ್ತಿ ಯಿಂದ ಕಾದು ನೋಡುತ್ತಿರುವುದು ಸಂತೋಷದ ವಿಷಯವೇ ಆಗಿದೆ. ನಾವು ಅಜ್ಜನಿಂದ ಕೇಳಿದಷ್ಟು ಕಥೆಗಳು ಮಕ್ಕಳಿಗಿಲ್ಲವಲ್ಲ ಎಂಬ ವಿಷಯ ಬಹಳಷ್ಟು‌ ಕಾಡುತ್ತಿತ್ತು .  ಈಗ ದೂರದರ್ಶನದಲ್ಲಿ  ಆ ಎಪಿಸೋಡ್ ಗಳನ್ನು ನೋಡುತ್ತಾ  ಮಕ್ಕಳೊಂದಿಗೆ ನಾವು ಖುಷಿಪಡುತ್ತಿದ್ದೇವೆ. ಬಾಲ್ಯದ ದಿನಗಳು  ಮರುಕಳಿಸುತ್ತಿವೆಯೇನೋ ಅನ್ನಿಸುತ್ತಿದೆ.
* ಅಶ್ವಿನಿ ಮೂರ್ತಿ‌ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…

5 hours ago

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

10 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

10 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

20 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

21 hours ago