Advertisement
ಅನುಕ್ರಮ

ಬೇಸಿಗೆ ರಜೆಯೂ ಅಜ್ಜನ ಮನೆಯೂ

Share

ಬೇಸಿಗೆ ರಜೆಯೆಂದರೆ ನೆನಪಾಗುವುದು  ಅಜ್ಜಿ ಮನೆ.

ಎಲ್ಲರೂ ಅಜ್ಜಿ ಮನೆಗೆ ಪೇಟೆಯಿಂದ ಹಳ್ಳಿಗೆ ಬಂದರೆ ನಾವು ಹಳ್ಳಿಯಿಂದ ಪೇಟೆಗೆ ಹೋಗುತ್ತಿದ್ದೆವು.  ಮನೆ ಮುಂದೆಯೇ ಸಾಲಾಗಿ ಹೋಗುವ ಆಟೋ ರಿಕ್ಷಾ, ಕಾರು , ಬಸ್ ಗಳು,  ನಮೂನೆ , ನಮೂನೆ ಬೈಕ್, ಸ್ಕೂಟರ್ ಗಳು ನಮ್ಮನ್ನು  ಅಜ್ಜಿ ಮನೆ ಪಕ್ಕದ ಕಂಪೌಂಡ್    ಹತ್ತಿರ ನಮ್ಮ ಅಜ್ಜನೊಟ್ಟಿಗೆ ನಿಂತು ಕೊಂಡು ಲೆಕ್ಕ ಹಾಕುತ್ತಿದ್ದೆವು. ಆ ದಿನಗಳಲ್ಲಿ ಲೆಕ್ಕದ ಬೈಕುಗಳು, ಎರಡಂಕಿಯೊಳಗಿನ ನಾಲ್ಕು ಚಕ್ರದ ವಾಹನಗಳು ಮಾರ್ಗ ದಲ್ಲಿ ಓಡಾಡುತ್ತಿದ್ದವು.  ನಾನು , ನನ್ನ ತಂಗಿ ಹಾಗೂ  ‌‌ಮಾವನ ಎರಡರ ಹರೆಯದ  ಮಗ ಮೂವರು ಸೇರಿ ಲೆಕ್ಕ ಹಾಕುತ್ತಿದ್ದೆವು. ನಾವು ಮಾರ್ಗಕ್ಕೆ ಇಳಿಯದಂತೆ ಅಜ್ಜ ಜಾಗ್ರತೆ ವಹಿಸುತ್ತಿದ್ದರು.   ಸಂಜೆ ಮಾವಂದಿರು ಮನೆಗೆ ಬರುತ್ತಲೇ ನಮ್ಮ ಲೆಕ್ಕ ಒಪ್ಪಿಸುತ್ತಿದ್ದೆವು. ಸುಸ್ತಾಗಿ ಬಂದಿದ್ದರೂ ಸ್ವಲ್ಪವೂ  ಬೇಸರಿಸಿಕೊಳ್ಳದೇ  ಕೇಳಿಸಿಕೊಳ್ಳುತ್ತಿದ್ದರು.  ಮರುದಿನಕ್ಕೆ ನಮ್ಮ ಬೇಡಿಕೆಗಳ ಪಟ್ಟಿಗಳನ್ನು ತಾಳ್ಮೆಯಿಂದ ಕೇಳಿಕೊಳ್ಳುತ್ತಿದ್ದರು.  ಸಾದ್ಯ ವಾದಷ್ಟು  ಇಡೇರಿಸುತ್ತಿದ್ದರು. ಆವಾಗಿನ ಮಕ್ಕಳ ಬೇಡಿಕೆ ಗಳೂ  ಸಣ್ಣ ಮಟ್ಟಿನವು . ಮಣಿಸರ,     ಪ್ಲಾಸ್ಟಿಕ್ ಬಳೆಗಳುು, ಪುಟ್ಟ ಕೈ ಚೀಲ ,   ಉದ್ದ ನೇಯ ಗೌನ್ ,  ಬಿಸ್್ಕ್ಕತ್ತು , ಪೆಪ್ಪರ್  ಮೆೆಂಟ್,  ಬಾಲಮಂಗಳ, ಚಂದಮಮ ಇವುಗಳು ನಮ್ಮ ಪಟ್ಟಿಯಲ್ಲಿ ಸ್ಥಾನ  ಪಡೆದವುಗಳು. ಮಾವಂದಿರೂ ‌ ಬುದ್ಧಿವಂತಿಕೆ ತೋರಿಸುತ್ತಾ    ಇದ್ದರು, ದಿನಕ್ಕೆ   ಒಂದೇ ಎಂದು.

ಈ ಎಲ್ಲಾ ವುಗಳಿಗಿಂತ ನಮಗೆ ಆಕರ್ಷಣೆ ಇದ್ದುದು ಅಜ್ಜ ಹೇಳುತ್ತಿದ್ದ ಕಥೆಗಳಲ್ಲಿ. ಅಜ್ಜ ನ ಮನೆ ಕೊಡಗಿನ ವಿರಾಜಪೇಟೆ. ಅಲ್ಲಿ ನಮ್ಮ ಇಲ್ಲಿಗಿಂತ ಚಳಿ. ನಮ್ಮ ಬಾಲ್ಯದ ದಿನಗಳಲ್ಲಿ ಪೇಟೆಯಾದರೂ ಹಳ್ಳಿಯ ವಾತಾವರಣ ಅಲ್ಲಿ ಇತ್ತು.  ಪೇಟೆಯ ಹೊರವಲಯದಲ್ಲಿ ಇದ್ದ ಕಾರಣ ಮಾಲಿನ್ಯ ರಹಿತ ವಾತಾವರಣ. ಹಾಗಾಗಿ  ಅಜ್ಜನನ್ನು ಪೇಟೆಗೆ ಹೋಗಲೂ ಬಿಡದೆ ಕಥೆ ಹೇಳುವಂತೆ ಸತಾಯಿಸುತ್ತಿದ್ದೆವು. ಅವರು ಒಂದು ಹೊತ್ತಿಗೆ ೫ ಕಥೆಗಳನ್ನು ಹೇಳದೆ ಬಿಡುತ್ತಲೇ  ಇರಲಿಲ್ಲ.  ಅವರೂ ಅಷ್ಟೇ ಬಹಳ ಶ್ರದ್ಧೆಯಿಂದ ಯಾವುದೂ ಪುನರಾವರ್ತಿತ ವಾಗದಂತೆ ವಿಭಿನ್ನ ಶೈಲಿಯಲ್ಲಿ ಬೇರೆ ಬೇರೆ ಕಥೆಗಳನ್ನು ಹೇಳುತ್ತಿದ್ದರು.   ಅಲ್ಲಿ ರಾಮಾಯಣ , ಮಹಾಭಾರತ,  ಕಥೆಗಳಲ್ಲದೆ  ತೆನಾಲಿರಾಮ,  ಚಾಣಕ್ಯ, ವಿಕ್ರಮ ಬೇತಾಳದ ಪಾತ್ರಗಳೆಲ್ಲಾ ಬಂದು ಹೋಗುತ್ತಿದ್ದವು.  ಅಜ್ಜ ಎಷ್ಟು ಆಕರ್ಷಕ ವಾಗಿ ಕಥೆ ಹೇಳುತ್ತಿದ್ದರೆಂದರೆ ಅಜ್ಜಿ ತಂದಿಡುತ್ತಿದ್ದ ಕೋಡುಬಳೆ, ಕರ್ಜಿಕಾಯಿ, ತುಕ್ಕುಡಿ ಕಣ್ಣಿಗೆ ಕಾಣುತ್ತಿರಲಿಲ್ಲ.  ಕಥೆಯ ಪಾತ್ರಗಳೇ ಕಣ್ಣಮುಂದಿರುತ್ತಿದ್ದುವು.  ಅಜ್ಜಿ ಅಜ್ಜನಿಗೆ ಹೇಳುತ್ತಿದ್ದ ಕೆಲಸಗಳನ್ನೆಲ್ಲಾ ನಾವೇ ಮಾಡಿಮುಗಿಸುತ್ತಿದ್ದೆವು  ಕಥೆಯ ಸಮಯ ತಪ್ಪಬಾರದಲ್ಲಾ ಎಂಬ ಮುಂದಾಲೋಚನೆಯಲ್ಲಿ.   ಆಮೇಲೆ ದೂರದರ್ಶನ ಬಂದರೂ ಅಜ್ಜ ಹೇಳುತ್ತಿದ್ದ ಕಥೆಯ ಆಕರ್ಷಣೆ ಕಡಿಮೆಯಾಗಲಿಲ್ಲ. ನಮ್ಮ ಬಾಲ್ಯದಲ್ಲಿ  ಪ್ರಸಾರವಾಗುತ್ತಿದ್ದ  ರಾಮಾಯಣ ಮಹಾಭಾರತ ಗಳು ಈಗ ಮತ್ತೆ ಪ್ರಸಾರವಾಗುತ್ತಿವೆ. ಅಂದು ಒಂದು ಎಪಿಸೋಡ್ ನಿಂದ ಮುಂದಿನ ಎಪಿಸೋಡ್ ಗೆ ಒಂ  ದು ವಾರ ಕಾಯಬೇಕಾಗುತ್ತಿತ್ತು. ಆದರೆ ಈಗ ಒಂದೇ ದಿನ ಎರಡು ಬಾರಿ ಪ್ರಸಾರವಾಗುತ್ತಿದೆ. ಅದೂ ರಾಮಾಯಣ ಹಾಗೂ ಮಹಾಭಾರತ  .  ನಾವು ನೋಡಿದ ಅದೇ ಸಂಚಿಕೆಗಳು ನಮ್ಮ ಮಕ್ಕಳೂ‌ ಆಸಕ್ತಿ ಯಿಂದ ಕಾದು ನೋಡುತ್ತಿರುವುದು ಸಂತೋಷದ ವಿಷಯವೇ ಆಗಿದೆ. ನಾವು ಅಜ್ಜನಿಂದ ಕೇಳಿದಷ್ಟು ಕಥೆಗಳು ಮಕ್ಕಳಿಗಿಲ್ಲವಲ್ಲ ಎಂಬ ವಿಷಯ ಬಹಳಷ್ಟು‌ ಕಾಡುತ್ತಿತ್ತು .  ಈಗ ದೂರದರ್ಶನದಲ್ಲಿ  ಆ ಎಪಿಸೋಡ್ ಗಳನ್ನು ನೋಡುತ್ತಾ  ಮಕ್ಕಳೊಂದಿಗೆ ನಾವು ಖುಷಿಪಡುತ್ತಿದ್ದೇವೆ. ಬಾಲ್ಯದ ದಿನಗಳು  ಮರುಕಳಿಸುತ್ತಿವೆಯೇನೋ ಅನ್ನಿಸುತ್ತಿದೆ.
* ಅಶ್ವಿನಿ ಮೂರ್ತಿ‌ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

7 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago