ಬೇಸಿಗೆ ರಜೆಯೆಂದರೆ ನೆನಪಾಗುವುದು ಅಜ್ಜಿ ಮನೆ.
ಎಲ್ಲರೂ ಅಜ್ಜಿ ಮನೆಗೆ ಪೇಟೆಯಿಂದ ಹಳ್ಳಿಗೆ ಬಂದರೆ ನಾವು ಹಳ್ಳಿಯಿಂದ ಪೇಟೆಗೆ ಹೋಗುತ್ತಿದ್ದೆವು. ಮನೆ ಮುಂದೆಯೇ ಸಾಲಾಗಿ ಹೋಗುವ ಆಟೋ ರಿಕ್ಷಾ, ಕಾರು , ಬಸ್ ಗಳು, ನಮೂನೆ , ನಮೂನೆ ಬೈಕ್, ಸ್ಕೂಟರ್ ಗಳು ನಮ್ಮನ್ನು ಅಜ್ಜಿ ಮನೆ ಪಕ್ಕದ ಕಂಪೌಂಡ್ ಹತ್ತಿರ ನಮ್ಮ ಅಜ್ಜನೊಟ್ಟಿಗೆ ನಿಂತು ಕೊಂಡು ಲೆಕ್ಕ ಹಾಕುತ್ತಿದ್ದೆವು. ಆ ದಿನಗಳಲ್ಲಿ ಲೆಕ್ಕದ ಬೈಕುಗಳು, ಎರಡಂಕಿಯೊಳಗಿನ ನಾಲ್ಕು ಚಕ್ರದ ವಾಹನಗಳು ಮಾರ್ಗ ದಲ್ಲಿ ಓಡಾಡುತ್ತಿದ್ದವು. ನಾನು , ನನ್ನ ತಂಗಿ ಹಾಗೂ ಮಾವನ ಎರಡರ ಹರೆಯದ ಮಗ ಮೂವರು ಸೇರಿ ಲೆಕ್ಕ ಹಾಕುತ್ತಿದ್ದೆವು. ನಾವು ಮಾರ್ಗಕ್ಕೆ ಇಳಿಯದಂತೆ ಅಜ್ಜ ಜಾಗ್ರತೆ ವಹಿಸುತ್ತಿದ್ದರು. ಸಂಜೆ ಮಾವಂದಿರು ಮನೆಗೆ ಬರುತ್ತಲೇ ನಮ್ಮ ಲೆಕ್ಕ ಒಪ್ಪಿಸುತ್ತಿದ್ದೆವು. ಸುಸ್ತಾಗಿ ಬಂದಿದ್ದರೂ ಸ್ವಲ್ಪವೂ ಬೇಸರಿಸಿಕೊಳ್ಳದೇ ಕೇಳಿಸಿಕೊಳ್ಳುತ್ತಿದ್ದರು. ಮರುದಿನಕ್ಕೆ ನಮ್ಮ ಬೇಡಿಕೆಗಳ ಪಟ್ಟಿಗಳನ್ನು ತಾಳ್ಮೆಯಿಂದ ಕೇಳಿಕೊಳ್ಳುತ್ತಿದ್ದರು. ಸಾದ್ಯ ವಾದಷ್ಟು ಇಡೇರಿಸುತ್ತಿದ್ದರು. ಆವಾಗಿನ ಮಕ್ಕಳ ಬೇಡಿಕೆ ಗಳೂ ಸಣ್ಣ ಮಟ್ಟಿನವು . ಮಣಿಸರ, ಪ್ಲಾಸ್ಟಿಕ್ ಬಳೆಗಳುು, ಪುಟ್ಟ ಕೈ ಚೀಲ , ಉದ್ದ ನೇಯ ಗೌನ್ , ಬಿಸ್್ಕ್ಕತ್ತು , ಪೆಪ್ಪರ್ ಮೆೆಂಟ್, ಬಾಲಮಂಗಳ, ಚಂದಮಮ ಇವುಗಳು ನಮ್ಮ ಪಟ್ಟಿಯಲ್ಲಿ ಸ್ಥಾನ ಪಡೆದವುಗಳು. ಮಾವಂದಿರೂ ಬುದ್ಧಿವಂತಿಕೆ ತೋರಿಸುತ್ತಾ ಇದ್ದರು, ದಿನಕ್ಕೆ ಒಂದೇ ಎಂದು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…