ಸುಳ್ಯ : ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಸ್ಕೂಟಿ ಸವಾರ ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42) ಅವರು ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಆ.24 ರಂದು ರಾತ್ರಿ ಅಪಘಾತ ಸಂಭವಿಸಿತ್ತು. ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಇದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…