ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel