ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…