ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"