ಡಾ.ಆದಿತ್ಯ ಚಣಿಲ
BHMS(Intern)
ಈಗೆಲ್ಲಾ ಕೇಳುವುದು ಬೊಜ್ಜು ಕರಗಿಸುವುದು ಹೇಗೆ ? ಇದಕ್ಕೇನು ಪರಿಹಾರ ಅಂತ. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ದೇಹದ ಆರೋಗ್ಯದ ಕಡೆ ಗಮನಹರಿಸುವುದೇ ಕಡಿಮೆ. ಬೆಳಿಗ್ಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸುವ ಹೊತ್ತಿಗೆ ಕೆಲಸಕ್ಕೆ ಹೋಗಲು ಸಮಯವಾಗಿರುತ್ತದೆ. ಸಂಜೆ ಮನಗೆ ಬರುವಾಗಲೇ ರಾತ್ರಿ ಊಟದ ಸಮಯವಾಗಿರುತ್ತದೆ. ಬೊಜ್ಜು ಬೆಳೆಯಲು ಕಾರಣಗಳು ಏನೇ ಇದ್ದರೂ ಅದರಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ. ಕೊಲೆಸ್ಟ್ರಾಲ್, ಅತಿಯಾದ ಒತ್ತಡ, ಬೆನ್ನುನೋವು, ಮಂಡಿನೋವು, ಹೃದಯಸಂಬಂಧಿ ಕಾಯಿಲೆ ಇತ್ಯಾದಿಗಳು ಕಾಣಿಸಿಕೊಳ್ಳುವುದು. ವ್ಯಾಯಾಮ ಮಾಡಲು ಸಮಯವಿಲ್ಲದೆ ಇರುವವರು ಇಲ್ಲಿ ಕೊಟ್ಟಿರುವ ಕೆಲವೊಂದು ಸಲಹೆಗಳನ್ನು ಪಾಲಿಸಿ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದಾಗಿದೆ. ಹಾಗಿದ್ದರೆ ಏನೇನು ಮಾಡಬೇಕು, ಏನು ಮಾಡಬಾರದು. ಇಲ್ಲಿದೆ ಟಿಪ್ಸ್ , ಓದಿ.
ವರ್ಲ್ಡ್ ಹೆಲ್ತ್ ಒರ್ಗನೈಸೇಷನ್ ನಲ್ಲಿ ಒಬೆಸಿಟಿ ಅಂದರೆ BMI=ತೂಕ kgಗಳಲ್ಲಿ ಭಾಗಿಸು ಎತ್ತರ (mt)2
BMI 25 ಕ್ಕಿಂತ ಮೇಲೆ ಇದ್ದರೆ ಅದು ಅಧಿಕ ತೂಕ
BMI 30 ಕ್ಕಿಂತ ಮೇಲೆ ಇದ್ದರೆ ಅದು ಬೊಜ್ಜುತನ
WHOಇದನ್ನು ಹೀಗೆ ಕೆಳಕಂಡಂತೆ ವಿಂಗಡಣೆ ಮಾಡಿದೆ
1. BMI ಮುಖಾಂತರ
18.5ಕ್ಕಿಂತ ಕಡಿಮೆ =ಕಡಿಮೆ ತೂಕ
18.5-24.5=ಸಾಧಾರಣ
24.5-29.9=ಅಧಿಕ ತೂಕ
30-34.5= ಬೊಜ್ಜುತನ ಕ್ಲಾಸ್ 1
34.5-39.9=ಬೊಜ್ಜುತನ ಕ್ಲಾಸ್ 2
40-49.9=ಬೊಜ್ಜುತನ ಕ್ಲಾಸ್3
2. ಬ್ರೋಚ್ಚಸ್ ಇಂಡೆಕ್ಸ್
ಎತ್ತರ(cms)-100
ಇಂದರಿಂದ ನಮ್ಮ ದೇಹಕ್ಕೆ ಬೇಕಾದ ಕನಿಷ್ಠ ತೂಕ ತಿಳಿಯಬಹುದು
ಯಾಕಪ್ಪಾ ಈ ಬೊಜ್ಜುತನ ಬರೋದು ?
1.ಜೇನೇಟಿಕ್- ಜೀನ್ ನ ಮುಖಾಂತರ ಬರಬಹುದು
2.ಅಧಿಕ ಪ್ರಮಾಣದ ಆಹಾರ ಸೇವನೆ-ಹೊರಗಿನ ಆಹಾರ ಪದಾರ್ಥ ಎಣ್ಣೆ ತಿಂಡಿಗಳು ಇತ್ಯಾದಿ
3.ಕಡಿಮೆ ಅವಧಿಯಲ್ಲಿ ಅಧಿಕ ಪ್ರಮಾಣದ ಆಹಾರ ಸೇವನೆ
4.ಕಡಿಮೆ ದೇಹದ ಚಟುವಟಿಕೆ
5.ಮದ್ದುಗಳು – ಅಧಿಕ ಸಮಯ ಮದ್ದು ತೆಗೆದುಕೊಳ್ಳುವುದರಿಂದ
6.ಮಾನಸಿಕ ಸಮಸ್ಯೆ -ಅಧಿಕ ಒತ್ತಡ, ಬೇಜಾರು ,ಕೋಪ ,ಮಾನಸಿಕ ಅಸಮತೋಲನ
7.ಖಾಯಿಲೆ – ಹೈಪೋಥೈರೋಇಡೀಸ್ಮ್,ಇತ್ಯಾದಿ
8.ಅಧಿಕ ಪ್ರಮಾಣದ ಮದ್ಯ ಮತ್ತು ಬೀಡಿಸೇವನೆ
ಗುಣ ಲಕ್ಷಣಗಳೇನು ಹಾಗಾದ್ರೆ?
ಏನು ಮಾಡೋದು ಹಾಗಿದ್ರೆ?
ಕ್ಯಾಲೋರಿ ಅತ್ಯಂತ ಅವಶ್ಯಕ ಬೊಜ್ಜುತನ ನಿವಾರಣೆಗೆಅತ್ಯಂತ ಕಡಿಮೆ ಪ್ರಮಾಣದ ಕ್ಯಾಲೋರಿ ಇರುವಂತಹ ಪದಾರ್ಥಗಳನ್ನು ತಿನ್ನುವುದು ಉತ್ತಮ.
ಏನೇನೆಲ್ಲಾ ತಿನ್ನಬೇಕು ಹಾಗಿದ್ರೆ ?
ಎಷ್ಟು ತಿನ್ನಬಹುದು
ತನ್ನ ದೇಹದ ತೂಕ ಪ್ರಾಯ ಮತ್ತು ದೈಹಿಕ ಚಟುವಟಿಕೆಗನುಸಾರವಾಗಿತಿನ್ನಬೇಕು
ತೂಕ ಇಳಿಸುವ ವ್ಯಾಯಾಮ:
ವ್ಯಾಯಾಮ
ಭಾರ ಎತ್ತುವುದು
ಏರೋಬಿಕ್ ವ್ಯಾಯಾಮ
ಮನೆಕೆಲಸ
ದಿನನಿತ್ಯದ ನಡಿಗೆ
ನೆನಪಿಡಬೇಕಾದ ಅಂಶ :
-ಅತ್ಯಂತ ತಿನ್ನುವುದನ್ನು ನಿಲ್ಲಿಸಿ
-ಬೆಳಗಿನ ತಿಂಡಿ ತಪ್ಪಿಸುವುದನ್ನು ನಿಲ್ಲಿಸಿ-ಬೆಳಗಿನ ತಿಂಡಿ ಬಿಡುವುದರಿಂದ ಮದ್ಯಾನ ಹೆಚ್ಚಾಗಿ ಹಸಿವಾಗುವುದರಿಂದ ಒಂದೇ ಸಮನೆ ತಿನ್ನ ಬೇಕಾಗುತ್ತದೆ ಇದೆ ತರಹ ತುಂಬಾ ದಿನ ಮಾಡುವುದರಿಂದ ಬೆಜ್ಜುತನ ಬರೋ ಸಾಧ್ಯತೆ ಇದೆ
-ನಿಧಾನವಾಗಿ ಆಹಾರ ಸೇವನೆ
-ಮನೆಯಲ್ಲಿ ಮಾಡಿದ ಅಡಿಗೆಗೆ ಮೊದಲ ಆದ್ಯತೆ
-T.V ಮುಂತಾದವುಗಳನ್ನು ನೋಡುವುದನ್ನು ಕಡಿಮೆ ಮಾಡಿ ದೈಹಿಕ ವ್ಯಾಯಾಮದ ಕಡೆಗೆ ಗಮನ
-ನಿದ್ರೆ(ಪ್ರತಿದಿನ ಕನಿಷ್ಠ 7-8ಗಂಟೆ ನಿದ್ರೆ ,ಮಕ್ಕಳಲ್ಲಿ ಕನಿಷ್ಠ 7-9 ಗಂಟೆ ನಿದ್ದೆ)
-ಪ್ಯಾಕೆಟ್ ಆಹಾರ ಪದಾರ್ಥಗಳು ಮತ್ತು ಜ್ಯೂಸ್ ಗಳನ್ನು ನಿಲ್ಲಿಸಿ
-ಸಕ್ಕರೆ ,ಉಪ್ಪು ,ಮದ್ಯ ,ತಂಬಾಕು ಇನ್ನಿತರೆ ಅಭ್ಯಾಸವನ್ನು ನಿಲ್ಲಿಸಿ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…