ಆಲಂಕಾರು : ಇಲ್ಲೊಂದು ಕಾಮಗಾರಿ ನಡೆದಿದೆ… ಆದರೆ ಕಾಮಗಾರಿ ಹೆಸರು , ಊರಿನ ಹೆಸರು ಮಾತ್ರಾ ಬೇರೆ…!
ಪುತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಕುದ್ಲೂರು ಅಂಗನವಾಡಿ ಕೇಂದ್ರದ ಬಳಿ ಕೆಲ ಸಮಯದ ಹಿಂದೆ ಕಾಂಕ್ರೀಟ್ ರಸ್ತೆ ಯಾಗಿತ್ತು. ಈ ಕಾಮಗಾರಿಗೆ 2 ವರ್ಷ ಕಳೆಯಿತು. ಆದರೆ ಬೋರ್ಡ್ ಹಾಕಿದವರು ಮಾತ್ರಾ ಈ ಕಾಮಗಾರಿ ಪ್ರದೇಶ ಗಮನಿಸಲಿಲ್ಲ. ಊರಿನವರು ಯಾರು ಗಮನಿಸಲಿಲ್ಲ. ಇದರಲ್ಲಿ ಕಾಮಗಾರಿ ಫಲಕ ಮಾತ್ರಾ ಬದಲಾಗಿದೆ.
ಈ ಗ್ರಾಮದ ಹೆಸರು ಕೊಯಿಲ , ಆದರೆ ಫಲಕದಲ್ಲಿ ಕೋಡಿಂಬಳ ಹೆಸರು ಇದೆ…!. ಊರಿನ ಹೆಸರು ಕುದ್ಲೂರು. ಆದರೆ ಈ ಫಲಕದಲ್ಲಿ ಮಾಲೇಶ್ವರ ಅಂತ ಇದೆ…!. ಇದು ಹೇಗಾಯಿತು ಎನ್ನುವುದು ಪ್ರಶ್ನೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇದನ್ನು ಗಮನಿಸಲಿಲ್ಲವೇ ? ಶಾಸಕ ಎಸ್.ಅಂಗಾರ ಗಮನಕ್ಕೂ ಇದು ಬರಲಿಲ್ಲವೇ ? ಅಧಿಕಾರಿಗಳು ನೋಡಲಿಲ್ಲವೇ ಎಂಬಿತ್ಯಾದಿ ಪ್ರಶ್ನೆಗೆ ಉತ್ತರವಿಲ್ಲ. ಕಾಮಗಾರಿಗೆ ಫಲಕ ಏಕೆ ಅವಶ್ಯ ಎಂಬ ಪ್ರಶ್ನೆಗೆ, ಕಾಮಗಾರಿ ನಡೆಸಿದ ಬಗ್ಗೆ ಊರ ಜನರಿಗೆ ಸರಿಯಾದ ಮಾಹಿತಿ ಬೇಕು ಎಂಬುದಷ್ಟೇ ಉದ್ದೇಶ.
ಫಲಕ ಬದಲಾಗಿ ಅನೇಕ ಸಮಯವಾದರೂ ಯಾರೂ ಗಮನಿಸದೇ ಇರುವುದು ಅಚ್ಚರಿ ಮೂಡಿಸಿದೆ. ಅಧಿಕಾರಿಗಳು , ಜನಪ್ರತಿನಿಧಿಗಳು ಸರಿಯಾದ ಫಲಕ ಅಳವಡಿಸಬೇಕು ಎಂದು ಸ್ಥಳೀಯರಾದ ಜೀಯಾ ಝೀಯಾ ಆತೂರು ಸುಳ್ಯನ್ಯೂಸ್.ಕಾಂ ಗೆ ಹೇಳುತ್ತಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…