ಆಲಂಕಾರು : ಇಲ್ಲೊಂದು ಕಾಮಗಾರಿ ನಡೆದಿದೆ… ಆದರೆ ಕಾಮಗಾರಿ ಹೆಸರು , ಊರಿನ ಹೆಸರು ಮಾತ್ರಾ ಬೇರೆ…!
ಪುತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಕುದ್ಲೂರು ಅಂಗನವಾಡಿ ಕೇಂದ್ರದ ಬಳಿ ಕೆಲ ಸಮಯದ ಹಿಂದೆ ಕಾಂಕ್ರೀಟ್ ರಸ್ತೆ ಯಾಗಿತ್ತು. ಈ ಕಾಮಗಾರಿಗೆ 2 ವರ್ಷ ಕಳೆಯಿತು. ಆದರೆ ಬೋರ್ಡ್ ಹಾಕಿದವರು ಮಾತ್ರಾ ಈ ಕಾಮಗಾರಿ ಪ್ರದೇಶ ಗಮನಿಸಲಿಲ್ಲ. ಊರಿನವರು ಯಾರು ಗಮನಿಸಲಿಲ್ಲ. ಇದರಲ್ಲಿ ಕಾಮಗಾರಿ ಫಲಕ ಮಾತ್ರಾ ಬದಲಾಗಿದೆ.
ಈ ಗ್ರಾಮದ ಹೆಸರು ಕೊಯಿಲ , ಆದರೆ ಫಲಕದಲ್ಲಿ ಕೋಡಿಂಬಳ ಹೆಸರು ಇದೆ…!. ಊರಿನ ಹೆಸರು ಕುದ್ಲೂರು. ಆದರೆ ಈ ಫಲಕದಲ್ಲಿ ಮಾಲೇಶ್ವರ ಅಂತ ಇದೆ…!. ಇದು ಹೇಗಾಯಿತು ಎನ್ನುವುದು ಪ್ರಶ್ನೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇದನ್ನು ಗಮನಿಸಲಿಲ್ಲವೇ ? ಶಾಸಕ ಎಸ್.ಅಂಗಾರ ಗಮನಕ್ಕೂ ಇದು ಬರಲಿಲ್ಲವೇ ? ಅಧಿಕಾರಿಗಳು ನೋಡಲಿಲ್ಲವೇ ಎಂಬಿತ್ಯಾದಿ ಪ್ರಶ್ನೆಗೆ ಉತ್ತರವಿಲ್ಲ. ಕಾಮಗಾರಿಗೆ ಫಲಕ ಏಕೆ ಅವಶ್ಯ ಎಂಬ ಪ್ರಶ್ನೆಗೆ, ಕಾಮಗಾರಿ ನಡೆಸಿದ ಬಗ್ಗೆ ಊರ ಜನರಿಗೆ ಸರಿಯಾದ ಮಾಹಿತಿ ಬೇಕು ಎಂಬುದಷ್ಟೇ ಉದ್ದೇಶ.
ಫಲಕ ಬದಲಾಗಿ ಅನೇಕ ಸಮಯವಾದರೂ ಯಾರೂ ಗಮನಿಸದೇ ಇರುವುದು ಅಚ್ಚರಿ ಮೂಡಿಸಿದೆ. ಅಧಿಕಾರಿಗಳು , ಜನಪ್ರತಿನಿಧಿಗಳು ಸರಿಯಾದ ಫಲಕ ಅಳವಡಿಸಬೇಕು ಎಂದು ಸ್ಥಳೀಯರಾದ ಜೀಯಾ ಝೀಯಾ ಆತೂರು ಸುಳ್ಯನ್ಯೂಸ್.ಕಾಂ ಗೆ ಹೇಳುತ್ತಾರೆ.
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…
PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…