ಯಕ್ಷಗಾನ : ಮಾತು-ಮಸೆತ

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

Advertisement

 

(ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ)

“ವತ್ಸಾ … ಕೆಲವೊಮ್ಮೆ ಈ ಪ್ರಪಂಚದಲ್ಲಿ ನಾವು ಎಣಿಸಿದಂತೆ ಅಲ್ಲ, ಎಣಿಸಿದ್ದಕ್ಕೆ ವಿಪರೀತವಾಗಿ ಕೆಲವು ಘಟನೆಗಳು ಒದಗುತ್ತವೆ. ಆಗ ಎಂತಹ ವಿದ್ವಾಂಸನಾದರೂ ಒಮ್ಮೆಗೆ ಆಶ್ಚರ್ಯಚಕಿತನಾಗುತ್ತಾನೆ. ಹೇಳಿ ಕೇಳಿ ವೃತ್ತಿಯಿಂದಲೂ, ಕ್ಷೇತ್ರ ವ್ಯತ್ಯಾಸದಿಂದಲೂ ನಿನ್ನ ತಂದೆಯಾದ ಬೃಹಸ್ಪತಿಗೂ, ನನಗೂ ಯಾವಾಗಲೂ ಸಂಘರ್ಷವೇ. ಆದರೆ ಒಂದು ಸಂತೋಷ. ನಮ್ಮೊಳಗೆ ಆಗುತ್ತಿರುವ ಸಂಘರ್ಷವು ಬೌದ್ಧಿಕವಾದುದು, ಭೌತಿಕವಾದುದಲ್ಲ. ಪ್ರಪಂಚದಲ್ಲಿ ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ ಪರಿಣಾಮವಾಗುತ್ತದೆ. ನೀನು ಬೃಹಸ್ಪತಿಯ ಮಗನಾದ್ದರಿಂದ ನನಗೆ ಅನ್ಯಥಾ ಭಾವನೆಯೇ ಇಲ್ಲ. ವೈಯಕ್ತಿಕವಾಗಿ ನಿನ್ನ ತಂದೆಗೂ ನನಗೂ ಏನೂ ರಾಗದ್ವೇಷಾದಿಗಳಿಲ್ಲ. ನಾವು ವಹಿಸಿಕೊಂಡಿರುವ ಪಕ್ಷ, ಆ ಪಕ್ಷದ ಉತ್ಕರ್ಷವನ್ನು ಬಯಸುವುದು ತಾತ್ವಿಕವಾಗಿ, ವೈಯಕ್ತಿಕವಾಗಿ ನೈತಿಕದ ಹೊಣೆ ಎಂಬುದರಲ್ಲಿ ಮಾತ್ರ. ಅವರಿದ್ದಲ್ಲಿ ನಾನಿಲ್ಲ, ನಾನಿದ್ದಲ್ಲಿ ಅವರಿಲ್ಲ. ಆದ ಕಾರಣ ಒಂದು ಮನೆಯ ಮಾಡಿನಡಿ ನಮಗೆ ಹೊಂದಾಣಿಕೆಯಿಲ್ಲ…

Advertisement

ನಿನ್ನ ಕೇಳಿಕೆಯಂತೂ ಸಾಧ್ಯವಿದ್ದ ಮಟ್ಟಿಗೆ ಯಾವ ವಿಘ್ನವಿಡ್ಡೂರಗಳಿದ್ದರೂ ಕಡೆಗಣಿಸಿ ನಾನು ಮಾಡಬೇಕಾದ, ಮಹಾಪ್ರಧಾನವಾದಂತಹ ಒಂದು ಕರ್ತವ್ಯವದು. ಪ್ರಾಣದಾನವು ದೊಡ್ಡ ದಾನ. ಹಾಗೆಯೇ ಅನ್ನದಾನ, ಔಷಧಿದಾನ. ನೀನು ಕೇಳುವಂತಹುದು ‘ವಿದ್ಯಾದಾನ.’ ವಿದ್ಯೆಯಿಂದ ಅಮೃತವನ್ನುಣಿಸುವುದು. ಮಿಕ್ಕದ್ದೆಲ್ಲ ಕ್ಷಣಿಕ. ಈ ದೇಹವಿದ್ದಷ್ಟು ಕಾಲ ಪ್ರಾಣದಾನ. ಹಸಿವೆ ಮುಗಿಯುವಲ್ಲಿಯ ತನಕ ಅನ್ನದಾನ. ರೋಗ ನಿವೃತ್ತಿಯಾಗುವಲ್ಲಿಯ ತನಕ ಔಷಧಿದಾನ. ಆದರೆ ಜೀವಾತ್ಮನಿಗೆ ಅಮೃತತ್ವ ಯೋಗವನ್ನು ಕರುಣಿಸುವುದು ಸತ್ಯವೂ, ಶಾಶ್ವತವೂ, ಸನಾತನವೂ ಆದ ‘ವಿದ್ಯೆ.’ ಆಚಾರ್ಯನೆಂದರೆ ಸಾಕ್ಷಾತ್ ಪರಬ್ರಹ್ಮ. ಅದು ಶ್ರುತಿವಾಕ್ಯ. ನೀನು ನನ್ನ ಶಿಷ್ಯ. ನನ್ನ ಗುರುತ್ವ ಅರ್ಥಪೂರ್ಣವಾಗಬೇಕು.”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

4 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

6 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

7 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

13 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

20 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

20 hours ago