Advertisement
ಯಕ್ಷಗಾನ : ಮಾತು-ಮಸೆತ

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

Advertisement
Advertisement

 

(ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ)

“ವತ್ಸಾ … ಕೆಲವೊಮ್ಮೆ ಈ ಪ್ರಪಂಚದಲ್ಲಿ ನಾವು ಎಣಿಸಿದಂತೆ ಅಲ್ಲ, ಎಣಿಸಿದ್ದಕ್ಕೆ ವಿಪರೀತವಾಗಿ ಕೆಲವು ಘಟನೆಗಳು ಒದಗುತ್ತವೆ. ಆಗ ಎಂತಹ ವಿದ್ವಾಂಸನಾದರೂ ಒಮ್ಮೆಗೆ ಆಶ್ಚರ್ಯಚಕಿತನಾಗುತ್ತಾನೆ. ಹೇಳಿ ಕೇಳಿ ವೃತ್ತಿಯಿಂದಲೂ, ಕ್ಷೇತ್ರ ವ್ಯತ್ಯಾಸದಿಂದಲೂ ನಿನ್ನ ತಂದೆಯಾದ ಬೃಹಸ್ಪತಿಗೂ, ನನಗೂ ಯಾವಾಗಲೂ ಸಂಘರ್ಷವೇ. ಆದರೆ ಒಂದು ಸಂತೋಷ. ನಮ್ಮೊಳಗೆ ಆಗುತ್ತಿರುವ ಸಂಘರ್ಷವು ಬೌದ್ಧಿಕವಾದುದು, ಭೌತಿಕವಾದುದಲ್ಲ. ಪ್ರಪಂಚದಲ್ಲಿ ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ ಪರಿಣಾಮವಾಗುತ್ತದೆ. ನೀನು ಬೃಹಸ್ಪತಿಯ ಮಗನಾದ್ದರಿಂದ ನನಗೆ ಅನ್ಯಥಾ ಭಾವನೆಯೇ ಇಲ್ಲ. ವೈಯಕ್ತಿಕವಾಗಿ ನಿನ್ನ ತಂದೆಗೂ ನನಗೂ ಏನೂ ರಾಗದ್ವೇಷಾದಿಗಳಿಲ್ಲ. ನಾವು ವಹಿಸಿಕೊಂಡಿರುವ ಪಕ್ಷ, ಆ ಪಕ್ಷದ ಉತ್ಕರ್ಷವನ್ನು ಬಯಸುವುದು ತಾತ್ವಿಕವಾಗಿ, ವೈಯಕ್ತಿಕವಾಗಿ ನೈತಿಕದ ಹೊಣೆ ಎಂಬುದರಲ್ಲಿ ಮಾತ್ರ. ಅವರಿದ್ದಲ್ಲಿ ನಾನಿಲ್ಲ, ನಾನಿದ್ದಲ್ಲಿ ಅವರಿಲ್ಲ. ಆದ ಕಾರಣ ಒಂದು ಮನೆಯ ಮಾಡಿನಡಿ ನಮಗೆ ಹೊಂದಾಣಿಕೆಯಿಲ್ಲ…

ನಿನ್ನ ಕೇಳಿಕೆಯಂತೂ ಸಾಧ್ಯವಿದ್ದ ಮಟ್ಟಿಗೆ ಯಾವ ವಿಘ್ನವಿಡ್ಡೂರಗಳಿದ್ದರೂ ಕಡೆಗಣಿಸಿ ನಾನು ಮಾಡಬೇಕಾದ, ಮಹಾಪ್ರಧಾನವಾದಂತಹ ಒಂದು ಕರ್ತವ್ಯವದು. ಪ್ರಾಣದಾನವು ದೊಡ್ಡ ದಾನ. ಹಾಗೆಯೇ ಅನ್ನದಾನ, ಔಷಧಿದಾನ. ನೀನು ಕೇಳುವಂತಹುದು ‘ವಿದ್ಯಾದಾನ.’ ವಿದ್ಯೆಯಿಂದ ಅಮೃತವನ್ನುಣಿಸುವುದು. ಮಿಕ್ಕದ್ದೆಲ್ಲ ಕ್ಷಣಿಕ. ಈ ದೇಹವಿದ್ದಷ್ಟು ಕಾಲ ಪ್ರಾಣದಾನ. ಹಸಿವೆ ಮುಗಿಯುವಲ್ಲಿಯ ತನಕ ಅನ್ನದಾನ. ರೋಗ ನಿವೃತ್ತಿಯಾಗುವಲ್ಲಿಯ ತನಕ ಔಷಧಿದಾನ. ಆದರೆ ಜೀವಾತ್ಮನಿಗೆ ಅಮೃತತ್ವ ಯೋಗವನ್ನು ಕರುಣಿಸುವುದು ಸತ್ಯವೂ, ಶಾಶ್ವತವೂ, ಸನಾತನವೂ ಆದ ‘ವಿದ್ಯೆ.’ ಆಚಾರ್ಯನೆಂದರೆ ಸಾಕ್ಷಾತ್ ಪರಬ್ರಹ್ಮ. ಅದು ಶ್ರುತಿವಾಕ್ಯ. ನೀನು ನನ್ನ ಶಿಷ್ಯ. ನನ್ನ ಗುರುತ್ವ ಅರ್ಥಪೂರ್ಣವಾಗಬೇಕು.”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago