Advertisement
ಯಕ್ಷಗಾನ : ಮಾತು-ಮಸೆತ

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

 

(ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ)

“ವತ್ಸಾ … ಕೆಲವೊಮ್ಮೆ ಈ ಪ್ರಪಂಚದಲ್ಲಿ ನಾವು ಎಣಿಸಿದಂತೆ ಅಲ್ಲ, ಎಣಿಸಿದ್ದಕ್ಕೆ ವಿಪರೀತವಾಗಿ ಕೆಲವು ಘಟನೆಗಳು ಒದಗುತ್ತವೆ. ಆಗ ಎಂತಹ ವಿದ್ವಾಂಸನಾದರೂ ಒಮ್ಮೆಗೆ ಆಶ್ಚರ್ಯಚಕಿತನಾಗುತ್ತಾನೆ. ಹೇಳಿ ಕೇಳಿ ವೃತ್ತಿಯಿಂದಲೂ, ಕ್ಷೇತ್ರ ವ್ಯತ್ಯಾಸದಿಂದಲೂ ನಿನ್ನ ತಂದೆಯಾದ ಬೃಹಸ್ಪತಿಗೂ, ನನಗೂ ಯಾವಾಗಲೂ ಸಂಘರ್ಷವೇ. ಆದರೆ ಒಂದು ಸಂತೋಷ. ನಮ್ಮೊಳಗೆ ಆಗುತ್ತಿರುವ ಸಂಘರ್ಷವು ಬೌದ್ಧಿಕವಾದುದು, ಭೌತಿಕವಾದುದಲ್ಲ. ಪ್ರಪಂಚದಲ್ಲಿ ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ ಪರಿಣಾಮವಾಗುತ್ತದೆ. ನೀನು ಬೃಹಸ್ಪತಿಯ ಮಗನಾದ್ದರಿಂದ ನನಗೆ ಅನ್ಯಥಾ ಭಾವನೆಯೇ ಇಲ್ಲ. ವೈಯಕ್ತಿಕವಾಗಿ ನಿನ್ನ ತಂದೆಗೂ ನನಗೂ ಏನೂ ರಾಗದ್ವೇಷಾದಿಗಳಿಲ್ಲ. ನಾವು ವಹಿಸಿಕೊಂಡಿರುವ ಪಕ್ಷ, ಆ ಪಕ್ಷದ ಉತ್ಕರ್ಷವನ್ನು ಬಯಸುವುದು ತಾತ್ವಿಕವಾಗಿ, ವೈಯಕ್ತಿಕವಾಗಿ ನೈತಿಕದ ಹೊಣೆ ಎಂಬುದರಲ್ಲಿ ಮಾತ್ರ. ಅವರಿದ್ದಲ್ಲಿ ನಾನಿಲ್ಲ, ನಾನಿದ್ದಲ್ಲಿ ಅವರಿಲ್ಲ. ಆದ ಕಾರಣ ಒಂದು ಮನೆಯ ಮಾಡಿನಡಿ ನಮಗೆ ಹೊಂದಾಣಿಕೆಯಿಲ್ಲ…

ನಿನ್ನ ಕೇಳಿಕೆಯಂತೂ ಸಾಧ್ಯವಿದ್ದ ಮಟ್ಟಿಗೆ ಯಾವ ವಿಘ್ನವಿಡ್ಡೂರಗಳಿದ್ದರೂ ಕಡೆಗಣಿಸಿ ನಾನು ಮಾಡಬೇಕಾದ, ಮಹಾಪ್ರಧಾನವಾದಂತಹ ಒಂದು ಕರ್ತವ್ಯವದು. ಪ್ರಾಣದಾನವು ದೊಡ್ಡ ದಾನ. ಹಾಗೆಯೇ ಅನ್ನದಾನ, ಔಷಧಿದಾನ. ನೀನು ಕೇಳುವಂತಹುದು ‘ವಿದ್ಯಾದಾನ.’ ವಿದ್ಯೆಯಿಂದ ಅಮೃತವನ್ನುಣಿಸುವುದು. ಮಿಕ್ಕದ್ದೆಲ್ಲ ಕ್ಷಣಿಕ. ಈ ದೇಹವಿದ್ದಷ್ಟು ಕಾಲ ಪ್ರಾಣದಾನ. ಹಸಿವೆ ಮುಗಿಯುವಲ್ಲಿಯ ತನಕ ಅನ್ನದಾನ. ರೋಗ ನಿವೃತ್ತಿಯಾಗುವಲ್ಲಿಯ ತನಕ ಔಷಧಿದಾನ. ಆದರೆ ಜೀವಾತ್ಮನಿಗೆ ಅಮೃತತ್ವ ಯೋಗವನ್ನು ಕರುಣಿಸುವುದು ಸತ್ಯವೂ, ಶಾಶ್ವತವೂ, ಸನಾತನವೂ ಆದ ‘ವಿದ್ಯೆ.’ ಆಚಾರ್ಯನೆಂದರೆ ಸಾಕ್ಷಾತ್ ಪರಬ್ರಹ್ಮ. ಅದು ಶ್ರುತಿವಾಕ್ಯ. ನೀನು ನನ್ನ ಶಿಷ್ಯ. ನನ್ನ ಗುರುತ್ವ ಅರ್ಥಪೂರ್ಣವಾಗಬೇಕು.”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

12 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago