Advertisement
ಯಕ್ಷಗಾನ : ಮಾತು-ಮಸೆತ

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

 

(ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ)

“ವತ್ಸಾ … ಕೆಲವೊಮ್ಮೆ ಈ ಪ್ರಪಂಚದಲ್ಲಿ ನಾವು ಎಣಿಸಿದಂತೆ ಅಲ್ಲ, ಎಣಿಸಿದ್ದಕ್ಕೆ ವಿಪರೀತವಾಗಿ ಕೆಲವು ಘಟನೆಗಳು ಒದಗುತ್ತವೆ. ಆಗ ಎಂತಹ ವಿದ್ವಾಂಸನಾದರೂ ಒಮ್ಮೆಗೆ ಆಶ್ಚರ್ಯಚಕಿತನಾಗುತ್ತಾನೆ. ಹೇಳಿ ಕೇಳಿ ವೃತ್ತಿಯಿಂದಲೂ, ಕ್ಷೇತ್ರ ವ್ಯತ್ಯಾಸದಿಂದಲೂ ನಿನ್ನ ತಂದೆಯಾದ ಬೃಹಸ್ಪತಿಗೂ, ನನಗೂ ಯಾವಾಗಲೂ ಸಂಘರ್ಷವೇ. ಆದರೆ ಒಂದು ಸಂತೋಷ. ನಮ್ಮೊಳಗೆ ಆಗುತ್ತಿರುವ ಸಂಘರ್ಷವು ಬೌದ್ಧಿಕವಾದುದು, ಭೌತಿಕವಾದುದಲ್ಲ. ಪ್ರಪಂಚದಲ್ಲಿ ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ ಪರಿಣಾಮವಾಗುತ್ತದೆ. ನೀನು ಬೃಹಸ್ಪತಿಯ ಮಗನಾದ್ದರಿಂದ ನನಗೆ ಅನ್ಯಥಾ ಭಾವನೆಯೇ ಇಲ್ಲ. ವೈಯಕ್ತಿಕವಾಗಿ ನಿನ್ನ ತಂದೆಗೂ ನನಗೂ ಏನೂ ರಾಗದ್ವೇಷಾದಿಗಳಿಲ್ಲ. ನಾವು ವಹಿಸಿಕೊಂಡಿರುವ ಪಕ್ಷ, ಆ ಪಕ್ಷದ ಉತ್ಕರ್ಷವನ್ನು ಬಯಸುವುದು ತಾತ್ವಿಕವಾಗಿ, ವೈಯಕ್ತಿಕವಾಗಿ ನೈತಿಕದ ಹೊಣೆ ಎಂಬುದರಲ್ಲಿ ಮಾತ್ರ. ಅವರಿದ್ದಲ್ಲಿ ನಾನಿಲ್ಲ, ನಾನಿದ್ದಲ್ಲಿ ಅವರಿಲ್ಲ. ಆದ ಕಾರಣ ಒಂದು ಮನೆಯ ಮಾಡಿನಡಿ ನಮಗೆ ಹೊಂದಾಣಿಕೆಯಿಲ್ಲ…

ನಿನ್ನ ಕೇಳಿಕೆಯಂತೂ ಸಾಧ್ಯವಿದ್ದ ಮಟ್ಟಿಗೆ ಯಾವ ವಿಘ್ನವಿಡ್ಡೂರಗಳಿದ್ದರೂ ಕಡೆಗಣಿಸಿ ನಾನು ಮಾಡಬೇಕಾದ, ಮಹಾಪ್ರಧಾನವಾದಂತಹ ಒಂದು ಕರ್ತವ್ಯವದು. ಪ್ರಾಣದಾನವು ದೊಡ್ಡ ದಾನ. ಹಾಗೆಯೇ ಅನ್ನದಾನ, ಔಷಧಿದಾನ. ನೀನು ಕೇಳುವಂತಹುದು ‘ವಿದ್ಯಾದಾನ.’ ವಿದ್ಯೆಯಿಂದ ಅಮೃತವನ್ನುಣಿಸುವುದು. ಮಿಕ್ಕದ್ದೆಲ್ಲ ಕ್ಷಣಿಕ. ಈ ದೇಹವಿದ್ದಷ್ಟು ಕಾಲ ಪ್ರಾಣದಾನ. ಹಸಿವೆ ಮುಗಿಯುವಲ್ಲಿಯ ತನಕ ಅನ್ನದಾನ. ರೋಗ ನಿವೃತ್ತಿಯಾಗುವಲ್ಲಿಯ ತನಕ ಔಷಧಿದಾನ. ಆದರೆ ಜೀವಾತ್ಮನಿಗೆ ಅಮೃತತ್ವ ಯೋಗವನ್ನು ಕರುಣಿಸುವುದು ಸತ್ಯವೂ, ಶಾಶ್ವತವೂ, ಸನಾತನವೂ ಆದ ‘ವಿದ್ಯೆ.’ ಆಚಾರ್ಯನೆಂದರೆ ಸಾಕ್ಷಾತ್ ಪರಬ್ರಹ್ಮ. ಅದು ಶ್ರುತಿವಾಕ್ಯ. ನೀನು ನನ್ನ ಶಿಷ್ಯ. ನನ್ನ ಗುರುತ್ವ ಅರ್ಥಪೂರ್ಣವಾಗಬೇಕು.”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

47 minutes ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

50 minutes ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago